ಆ್ಯಪ್ನಗರ

23ರಿಂದ ಶಿವಮೊಗ್ಗದಲ್ಲಿರಾಜ್ಯ ಮಟ್ಟದ ಅಥ್ಲೆಟಿಕ್ಸ್‌

ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಡಿವಿಎಸ್‌ ಸ್ವತಂತ್ರ ಪದವಿಪೂರ್ವ ಕಾಲೇಜುಗಳ ಸಹಯೋಗದಲ್ಲಿಅ. 23ರಿಂದ 25ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿರಾಜ್ಯಮಟ್ಟದ 19ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್‌ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಹೇಳಿದರು.

Vijaya Karnataka 12 Oct 2019, 5:00 am
ಶಿವಮೊಗ್ಗ: ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಡಿವಿಎಸ್‌ ಸ್ವತಂತ್ರ ಪದವಿಪೂರ್ವ ಕಾಲೇಜುಗಳ ಸಹಯೋಗದಲ್ಲಿಅ. 23ರಿಂದ 25ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿರಾಜ್ಯಮಟ್ಟದ 19ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್‌ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಹೇಳಿದರು.
Vijaya Karnataka Web state athletics at shivamogga from 23
23ರಿಂದ ಶಿವಮೊಗ್ಗದಲ್ಲಿರಾಜ್ಯ ಮಟ್ಟದ ಅಥ್ಲೆಟಿಕ್ಸ್‌


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಏರ್ಪಡಿಸಿದ್ದ ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆಯಲ್ಲಿಅವರು ಮಾತನಾಡಿ, ಈ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಕ್ರೀಡಾಕೂಟದಲ್ಲಿರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳಿಂದ 2,500ಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಕ್ರೀಡಾಕೂಟದಲ್ಲಿಗುಡ್ಡಗಾಡು ಓಟ ಸೇರಿದಂತೆ ಸುಮಾರು 24 ವಿವಿಧ ರೀತಿಯ ಅಥ್ಲೆಟಿಕ್ಸ್‌ ಕ್ರೀಡೆಗಳಿಗೆ ನಗರದ ನೆಹರೂ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಕ್ರೀಡೆಗಳು ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕು. ಅದಕ್ಕಾಗಿ ತೀರ್ಪುಗಾರರಾಗಿ ಸ್ಥಳೀಯ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು ಸೇರಿದಂತೆ ರಾಜ್ಯದ ಪರಿಣಿತ ತೀರ್ಪುಗಾರರನ್ನು ಆಹ್ವಾನಿಸಲಾಗುವುದು ಎಂದರು.

ಕ್ರೀಡಾಕೂಟವು ನಿರೀಕ್ಷೆಯಂತೆ ನಡೆಯಲು ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳನ್ನೊಳಗೊಂಡ ಹಲವು ಸಮಿತಿ ರಚಿಸಿ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದೆ. ಕ್ರೀಡಾಕೂಟದಲ್ಲಿವಿಜೇತರಾದವರಿಗೆ ಆಕರ್ಷಕ ಟ್ರೋಫಿ ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು. ಅಲ್ಲದೇ ಭಾಗವಹಿಸಿದ ಎಲ್ಲಕ್ರೀಡಾಪಟುಗಳಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು.

ಅ.23ರಂದು ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿಜಿಲ್ಲಾಎಸ್‌ಪಿ ಶಾಂತರಾಜ್‌, ಡಿಡಿಪಿಯು ಇಂತಿಯಾಜ್‌ ಅಹ್ಮದ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‌ ಮತ್ತಿತರರು ಹಾಜರಿದ್ದರು.

--------------

ಕ್ರೀಡಾಕೂಟದಲ್ಲಿಭಾಗವಹಿಸುವ ವಿದ್ಯಾರ್ಥಿನಿಯರಿಗೆ ಸ್ಥಳೀಯ ಕಸ್ತೂರಬಾ ಮಹಿಳಾ ಕಾಲೇಜಿನಲ್ಲಿಹಾಗೂ ವಿದ್ಯಾರ್ಥಿಗಳಿಗೆ ಡಿವಿಎಸ್‌ ಸ್ವತಂತ್ರ ಪಿಯು ಕಾಲೇಜು ಹಾಗೂ ಸಮುದಾಯಭವನವನ್ನು ಕಾಯ್ದಿರಿಸಲಾಗಿದೆ. ಅಲ್ಲದೆ ಅತಿಥ್ಯದ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಕೂಟ ನಡೆಯುವ ಸ್ಥಳದಲ್ಲಿಪ್ರಥಮ ಚಿಕಿತ್ಸೆಗಾಗಿ ಪ್ರತ್ಯೇಕ ಘಟಕ ಹಾಗೂ ವೈದ್ಯರನ್ನು ನಿಯೋಜಿಸಲು ಹಾಗೂ ಅಗತ್ಯವಿರುವ ಕುಡಿಯುವ ನೀರು ಮತ್ತು ಸಂಚಾರಿ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

-ಕೆ.ಬಿ.ಶಿವಕುಮಾರ್‌, ಜಿಲ್ಲಾಧಿಕಾರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ