ಆ್ಯಪ್ನಗರ

ಸೊರಬ ಪಟ್ಟಣದಲ್ಲಿ ಬಂಗಾರಪ್ಪನವರ ಸ್ಮಾರಕ ನಿರ್ಮಾಣಕ್ಕೆ 1ಕೋಟಿ ರೂ. ಬಿಡುಗಡೆ: ಸಿಎಂ ಬಿಎಸ್‍ವೈ

​​ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 87ನೇ ಜನ್ಮಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಉದ್ಯಾನವನವನ್ನು ಆನ್‍ಲೈನ್ ಸಮಾರಂಭದ ಮೂಲಕ ಉದ್ಘಾಟಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್‌ವೈ, ಸೊರಬ ಪಟ್ಟಣದಲ್ಲಿ ಉದ್ಘಾಟಿಸಲಾಗಿರುವ ಉದ್ಯಾನವನ್ನು ಪಟ್ಟಣ ಪಂಚಾಯತ್ ಆಡಳಿತ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಸಿಎಂ ನಿಎಸ್‌ವೈ ಹೇಳಿದರು.

Vijaya Karnataka Web 26 Oct 2020, 1:54 pm
ಶಿವಮೊಗ್ಗ: ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದರು. ಎಸ್.ಬಂಗಾರಪ್ಪನವರ 87ನೇ ಸಂಸ್ಮರಣೆ ಕಾರ್ಯಕ್ರಮ ಹಾಗೂ ಸೊರಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ಉದ್ಯಾನವನವನ್ನು ವರ್ಚುಯಲ್ ಮಾಧ್ಯಮದ ಮೂಲಕ ಉದ್ಘಾಟಿಸಿದರು.
Vijaya Karnataka Web ElPF05GVMAomiQs


ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 87ನೇ ಜನ್ಮಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಉದ್ಯಾನವನವನ್ನು ಆನ್‍ಲೈನ್ ಸಮಾರಂಭದ ಮೂಲಕ ಉದ್ಘಾಟಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್‌ವೈ, ಸೊರಬ ಪಟ್ಟಣದಲ್ಲಿ ಉದ್ಘಾಟಿಸಲಾಗಿರುವ ಉದ್ಯಾನವನ್ನು ಪಟ್ಟಣ ಪಂಚಾಯತ್ ಆಡಳಿತ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಸಮಾಜಮುಖಿ ಚಿಂತನೆಯ ನಾಯಕರಾಗಿದ್ದ ಬಂಗಾರಪ್ಪ ಅವರು ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಇದೆ ವೇಳ ಸಿಎಂ ಬಿಎಸ್‌ವೈ ಅವರನ್ನು ಸ್ಮರಿಸಿದರು.

ಸಕ್ರೆಬೈಲು ಆನೆ ಬಿಡಾರದ 'ರಂಗ' ಆನೆ ಕಾಡಾನೆ ದಾಳಿಗೆ ಬಲಿ

ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುದಯಕ್ಕಾಗಿ ನಿರಂತರವಾಗಿ ಶ್ರಮಿಸಿದ ಅವರು ಜನಪರ ಚಿಂತನೆಯ ನಾಯಕ ಎಂದು ಬಣ್ಣಿಸಿದರು. ಇನ್ನು ಈ ವೇಳೆ ಸಂಸದ ಬಿವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ