ಶಿವಮೊಗ್ಗ : ಜಿಲ್ಲೆಯ ಹಲವು ತಾಲೂಕುಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಪರಿಸ್ಥಿತಿ ಎದುರಿಸಲು 24ಗಿ7 ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಒಗಳ ಜತೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಅವರು, ಅತಿವೃಷ್ಟಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡು ಪರಿಹಾರ ಕಾರ್ಯವನ್ನು ತ್ವರಿತಗತಿಯಲ್ಲಿ ನಡೆಸುವಂತೆ ಸೂಚನೆ ನೀಡಿದರು.
ಪ್ರವಾಹದಿಂದ ಸಂಪರ್ಕ ಕಡಿದುಕೊಂಡಿರುವ ಗ್ರಾಮಗಳಿಗೆ ತಕ್ಷ ಣ ಪರ್ಯಾಯ ಸಂಪರ್ಕ ಕಲ್ಪಿಸಬೇಕು. ಇನ್ನು ಒಂದೆರಡು ದಿನಗಳ ಕಾಲ ಇದೇ ರೀತಿ ಮಳೆಯಾದರೆ ಸಂಪರ್ಕ ಕಡಿದುಕೊಳ್ಳಬಹುದಾದ ಗ್ರಾಮಗಳ ಪಟ್ಟಿಯನ್ನು ಸಲ್ಲಿಸಬೇಕು. ನೀರು ತುಂಬಿ ಕೆರೆ ಕಟ್ಟೆ ಒಡೆಯುವ ಸಾಧ್ಯತೆಯಿರುವ ಕುರಿತ ಮಾಹಿತಿ ನೀಡಬೇಕು. ಅಂತಹ ಕಡೆಗಳಲ್ಲಿ ಮುಂಜಾಗರೂಕತಾ ಕ್ರಮ ಜರುಗಿಸಬೇಕು. ಮನೆ, ಆಸ್ತಿಪಾಸ್ತಿ ಹಾನಿ, ಜೀವಹಾನಿ ಹಾಗೂ ಜಾನುವಾರು ಹಾನಿ ಪ್ರಕರಣಗಳಲ್ಲಿ ತಕ್ಷ ಣ ಸ್ಥಳಕ್ಕೆ ಭೇಟಿ ನೀಡಿ ಹಾನಿ ಅಂದಾಜು ಮಾಡಿ ಒಂದೆರಡು ದಿನಗಳಲ್ಲಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಪ್ರವಾಹ ಪರಿಸ್ಥಿತಿ ಬಗ್ಗೆ ನದಿಪಾತ್ರದಲ್ಲಿರುವ ಜನರಿಗೆ ಎಚ್ಚರಿಕೆ ನೀಡಬೇಕು. ಅಗತ್ಯ ಬಿದ್ದರೆ ಅವರನ್ನು ಅಲ್ಲಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಅಂತಹ ಕಡೆಗಳಲ್ಲಿ ಗಂಜಿ ಕೇಂದ್ರ ಸ್ಥಾಪನೆಗೆ ಎಲ್ಲ ಸಿದ್ಧತೆಗಳನ್ನು ಮಾಡಬೇಕು. ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು ಬೋಟ್ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗಿದ್ದು, ಅದನ್ನು ಸರಿಪಡಿಸಲು ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕು. ಮರ ಕಟ್ಟಿಂಗ್ ಮೆಷಿನ್, ಸೇರಿದಂತೆ ಅಗತ್ಯ ಸಾಮಾಗ್ರಿಗಳ ಖರೀದಿ ಕುರಿತು ತಹಸೀಲ್ದಾರ್ ಮುಖಾಂತರ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಂಟ್ರೋಲ್ ರೂಂ: ಎಲ್ಲ ತಾಲೂಕುಗಳಲ್ಲಿ 24ಗಿ7 ಕಂಟ್ರೋಲ್ ರೂಂ ಆರಂಭಿಸಬೇಕು. ಅಗತ್ಯ ಸಿಬ್ಬಂದಿ ನಿಯೋಜಿಸಬೇಕು. ಪ್ರವಾಹ ಹಾನಿ ಇತ್ಯಾದಿ ಕುರಿತು ಮಾಹಿತಿ ಬಂದ ತಕ್ಷ ಣ ಸಂಬಂಧಪಟ್ಟವರ ಗಮನಕ್ಕೆ ತಂದು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಪಂಚಾಯಿತಿಗಳಲ್ಲಿ ಸಿಬ್ಬಂದಿ ಸದಾ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.
ಕೇಂದ್ರಸ್ಥಾನ ಬಿಟ್ಟು ತೆರಳಬಾರದು: ಎಲ್ಲ ಅಧಿಕಾರಿ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ರಜೆಯಲ್ಲಿ ತೆರಳಿದವರು ಕೂಡಲೆ ಕರ್ತವ್ಯಕ್ಕೆ ಹಿಂತಿರುಗಬೇಕು. ಅನಧಿಕೃತವಾಗಿ ರಜೆಯಲ್ಲಿರುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಅಪರ ಜಿಲ್ಲಾಧಿಕಾರಿ ಅನುರಾಧ, ಉಪವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಒಗಳ ಜತೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಅವರು, ಅತಿವೃಷ್ಟಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡು ಪರಿಹಾರ ಕಾರ್ಯವನ್ನು ತ್ವರಿತಗತಿಯಲ್ಲಿ ನಡೆಸುವಂತೆ ಸೂಚನೆ ನೀಡಿದರು.
ಪ್ರವಾಹದಿಂದ ಸಂಪರ್ಕ ಕಡಿದುಕೊಂಡಿರುವ ಗ್ರಾಮಗಳಿಗೆ ತಕ್ಷ ಣ ಪರ್ಯಾಯ ಸಂಪರ್ಕ ಕಲ್ಪಿಸಬೇಕು. ಇನ್ನು ಒಂದೆರಡು ದಿನಗಳ ಕಾಲ ಇದೇ ರೀತಿ ಮಳೆಯಾದರೆ ಸಂಪರ್ಕ ಕಡಿದುಕೊಳ್ಳಬಹುದಾದ ಗ್ರಾಮಗಳ ಪಟ್ಟಿಯನ್ನು ಸಲ್ಲಿಸಬೇಕು. ನೀರು ತುಂಬಿ ಕೆರೆ ಕಟ್ಟೆ ಒಡೆಯುವ ಸಾಧ್ಯತೆಯಿರುವ ಕುರಿತ ಮಾಹಿತಿ ನೀಡಬೇಕು. ಅಂತಹ ಕಡೆಗಳಲ್ಲಿ ಮುಂಜಾಗರೂಕತಾ ಕ್ರಮ ಜರುಗಿಸಬೇಕು. ಮನೆ, ಆಸ್ತಿಪಾಸ್ತಿ ಹಾನಿ, ಜೀವಹಾನಿ ಹಾಗೂ ಜಾನುವಾರು ಹಾನಿ ಪ್ರಕರಣಗಳಲ್ಲಿ ತಕ್ಷ ಣ ಸ್ಥಳಕ್ಕೆ ಭೇಟಿ ನೀಡಿ ಹಾನಿ ಅಂದಾಜು ಮಾಡಿ ಒಂದೆರಡು ದಿನಗಳಲ್ಲಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಪ್ರವಾಹ ಪರಿಸ್ಥಿತಿ ಬಗ್ಗೆ ನದಿಪಾತ್ರದಲ್ಲಿರುವ ಜನರಿಗೆ ಎಚ್ಚರಿಕೆ ನೀಡಬೇಕು. ಅಗತ್ಯ ಬಿದ್ದರೆ ಅವರನ್ನು ಅಲ್ಲಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಅಂತಹ ಕಡೆಗಳಲ್ಲಿ ಗಂಜಿ ಕೇಂದ್ರ ಸ್ಥಾಪನೆಗೆ ಎಲ್ಲ ಸಿದ್ಧತೆಗಳನ್ನು ಮಾಡಬೇಕು. ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು ಬೋಟ್ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗಿದ್ದು, ಅದನ್ನು ಸರಿಪಡಿಸಲು ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕು. ಮರ ಕಟ್ಟಿಂಗ್ ಮೆಷಿನ್, ಸೇರಿದಂತೆ ಅಗತ್ಯ ಸಾಮಾಗ್ರಿಗಳ ಖರೀದಿ ಕುರಿತು ತಹಸೀಲ್ದಾರ್ ಮುಖಾಂತರ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಂಟ್ರೋಲ್ ರೂಂ: ಎಲ್ಲ ತಾಲೂಕುಗಳಲ್ಲಿ 24ಗಿ7 ಕಂಟ್ರೋಲ್ ರೂಂ ಆರಂಭಿಸಬೇಕು. ಅಗತ್ಯ ಸಿಬ್ಬಂದಿ ನಿಯೋಜಿಸಬೇಕು. ಪ್ರವಾಹ ಹಾನಿ ಇತ್ಯಾದಿ ಕುರಿತು ಮಾಹಿತಿ ಬಂದ ತಕ್ಷ ಣ ಸಂಬಂಧಪಟ್ಟವರ ಗಮನಕ್ಕೆ ತಂದು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಪಂಚಾಯಿತಿಗಳಲ್ಲಿ ಸಿಬ್ಬಂದಿ ಸದಾ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.
ಕೇಂದ್ರಸ್ಥಾನ ಬಿಟ್ಟು ತೆರಳಬಾರದು: ಎಲ್ಲ ಅಧಿಕಾರಿ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ರಜೆಯಲ್ಲಿ ತೆರಳಿದವರು ಕೂಡಲೆ ಕರ್ತವ್ಯಕ್ಕೆ ಹಿಂತಿರುಗಬೇಕು. ಅನಧಿಕೃತವಾಗಿ ರಜೆಯಲ್ಲಿರುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಅಪರ ಜಿಲ್ಲಾಧಿಕಾರಿ ಅನುರಾಧ, ಉಪವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.