ಆ್ಯಪ್ನಗರ

ಮಳಲಿ, ಮೂಲೆಗೆದ್ದೆ ಶ್ರೀಗಳಿಂದ ಉಗ್ರ ಹೋರಾಟದ ಎಚ್ಚರಿಕೆ

ಶರಾವತಿ ನೀರು ಹರಿಸುವ ಅವೈಜ್ಞಾನಿಕ ಯೋಜನೆಯನ್ನು ಸರಕಾರ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಮೂಲೆಗದ್ದೆ ಶಿವಯೋಗಾಶ್ರಮದ ಶ್ರೀಅಭಿನವ ಚನ್ನಬಸವ ಸ್ವಾಮೀಜಿ ಎಚ್ಚರಿಸಿದರು.

Vijaya Karnataka 4 Jul 2019, 5:00 am
ರಿಪ್ಪನ್‌ಪೇಟೆ: ಶರಾವತಿ ನೀರು ಹರಿಸುವ ಅವೈಜ್ಞಾನಿಕ ಯೋಜನೆಯನ್ನು ಸರಕಾರ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಮೂಲೆಗದ್ದೆ ಶಿವಯೋಗಾಶ್ರಮದ ಶ್ರೀಅಭಿನವ ಚನ್ನಬಸವ ಸ್ವಾಮೀಜಿ ಎಚ್ಚರಿಸಿದರು.
Vijaya Karnataka Web struggle warning
ಮಳಲಿ, ಮೂಲೆಗೆದ್ದೆ ಶ್ರೀಗಳಿಂದ ಉಗ್ರ ಹೋರಾಟದ ಎಚ್ಚರಿಕೆ


ಪಟ್ಟಣದ ಗ್ರಾ.ಪಂ. ಸಭಾಭವನದಲ್ಲಿ ಆಯೋಜಿಸಿದ್ದ ಶರಾವತಿ ಉಳಿಸಿ ಆಂದೋಲನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕೇಂದ್ರದ ಮೋದಿ ಸರಕಾರ ಈಗಾಗಲೇ ನದಿ ಜೋಡಣೆ ಪ್ರಸ್ತಾಪ ಮಾಡಿದೆ. ಇದರಿಂದ ಗೋದಾವರಿ-ಕಾವೇರಿ, ಕಪಿಲ ನದಿ ಜೋಡಣೆಯಿಂದ ಬೆಂಗಳೂರು ನಗರಕ್ಕೆ ನೀರು ಹರಿಸಲು ಸಾಧ್ಯವಾಗಲಿದೆ. ಆದ್ದರಿಂದ ಈ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿದರು.

ಜೆ.ಎಸ್‌.ಚಂದ್ರಪ್ಪ,ಬೆಳಕೋಡು ಹಾಲಸ್ವಾಮಿಗೌಡ, ತಾ.ಪಂ. ಸದಸ್ಯ ಚಂದ್ರೇಶ್‌,ಅಲುವಳ್ಳಿ ವೀರೇಶ್‌, ಆರ್‌.ಟಿ.ಗೋಪಾಲ್‌, ಟಿ.ಅರ್‌.ಕೃಷ್ಣಪ್ಪ, ಎಂ.ಡಿ.ಇಂದ್ರಮ್ಮ, ಸುಗಂಧರಾಜ್‌ ಮತ್ತಿತರರು ಹಾಜರಿದ್ದರು. ಎನ್‌.ವರ್ತೇಶ್‌ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ