ಆ್ಯಪ್ನಗರ

ವಿದ್ಯಾರ್ಥಿನಿ ಆತ್ಮಹತ್ಯೆ

ಮನೆ ಒಳಗೆ ನೇಣು ಬಿಗಿದುಕೊಂಡು ಶಾಲಾ ಬಾಲಕಿ ಸಿಂಚನ (15) ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಪಟ್ಟಣದ ರಥಬೀದಿಯಲ್ಲಿ ನಡೆದಿದೆ.

Vijaya Karnataka 23 Aug 2019, 5:00 am
ತೀರ್ಥಹಳ್ಳಿ: ಮನೆ ಒಳಗೆ ನೇಣು ಬಿಗಿದುಕೊಂಡು ಶಾಲಾ ಬಾಲಕಿ ಸಿಂಚನ (15) ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಪಟ್ಟಣದ ರಥಬೀದಿಯಲ್ಲಿ ನಡೆದಿದೆ.
Vijaya Karnataka Web student suicide
ವಿದ್ಯಾರ್ಥಿನಿ ಆತ್ಮಹತ್ಯೆ

ಸಿಂಚನ ಪಟ್ಟಣದ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಂದಿನಂತೆ ಬೆಳಗ್ಗೆ ಶಾಲೆಗೆ ತೆರಳಿದ್ದ ಸಿಂಚನಳಿಗೆ ಜ್ವರ ಇದೆ ಎಂದು ಶಿಕ್ಷಕರು ಮಾಹಿತಿ ನೀಡಿದ ಕಾರಣ ಮಧಾಹ್ನ 11ರ ಹೊತ್ತಿಗೆ ತಾಯಿ ಶಾಲೆಗೆ ಹೋಗಿ ಪುತ್ರಿಯನ್ನು ಮನೆಗೆ ವಾಪಸ್‌ ಕರೆದುಕೊಂಡು ಬಂದಿದ್ದರು. ಔಷಧ ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಹೋದಾಗ ಪುತ್ರಿ ಮೃತಪಟ್ಟಿರುವುದು ಕಾಣಿಸಿದೆ. ಕಳೆದ ವರ್ಷ ತಂದೆ ಆತ್ಮಹತ್ಯೆಯಿಂದ ಮೃತಪಟ್ಟಿರುವ ಕಾರಣ ಸಿಂಚನ ಖಿನ್ನತೆಗೆ ಗುರಿ ಆಗಿದ್ದಳು ಎನ್ನಲಾಗಿದ್ದು ತೀರ್ಥಹಳ್ಳಿ ಠಾಣೆ ಪಿಎಸೈ ಗುರುಪ್ರಸಾದ್‌ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ