Please enable javascript.ಪ್ರಕಾಶ್ ರಾಜ್‌ಗೆ ತುಕ್ಡೇ ಗ್ಯಾಂಗ್‌ ಎಂದು ವಿದ್ಯಾರ್ಥಿಗಳು ಧಿಕ್ಕಾರ; ಓಡಾಡಿದ ಸಭಾಂಗಣ ಜಾಗಕ್ಕೆ ಗೋಮೂತ್ರ ಹಾಕಿ ಶುದ್ಧೀಕರಣ! - students defy prakash raj in bhadravati purification by putting gomutra on the hall space - Vijay Karnataka

ಪ್ರಕಾಶ್ ರಾಜ್‌ಗೆ ತುಕ್ಡೇ ಗ್ಯಾಂಗ್‌ ಎಂದು ವಿದ್ಯಾರ್ಥಿಗಳು ಧಿಕ್ಕಾರ; ಓಡಾಡಿದ ಸಭಾಂಗಣ ಜಾಗಕ್ಕೆ ಗೋಮೂತ್ರ ಹಾಕಿ ಶುದ್ಧೀಕರಣ!

Edited by ಜಯಪ್ರಕಾಶ್‌ ಬಿರಾದಾರ್‌ | Vijaya Karnataka Web 8 Aug 2023, 9:09 pm
Subscribe

Student Against Prakash Raj : ನಟ ಪ್ರಕಾಶ್‌ ರಾಜ್‌ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಕಾಲೇಜು ಕಾರ್ಯಕ್ರಮಕ್ಕೆ ತೆರಳಿದ್ದು, ಅಲ್ಲಿ ವಿದ್ಯಾರ್ಥಿಗಳು ತುಕ್ಡೇ ಗ್ಯಾಂಗ್‌ ಎಂದು ಧಿಕ್ಕಾರ ಕೂಗಿದ್ದಾರೆ. ನಟ ಓಡಾಡಿದ ಜಾಗಕ್ಕೆ ಗೋ ಮೂತ್ರ ಹಾಕಿ ಶುದ್ಧೀಕರಣ ಮಾಡಿದ್ದಾರೆ.

ಹೈಲೈಟ್ಸ್‌:

  • ಭದ್ರಾವತಿಯಲ್ಲಿ ನಟ ಪ್ರಕಾಶ್ ರಾಜ್‌ ವಿರುದ್ಧ ಧಿಕ್ಕಾರ ಕೂಗಿದ ವಿದ್ಯಾರ್ಥಿಗಳು.
  • ಪ್ರಕಾಶ್ ರಾಜ್ ಭೇಟಿ ನೀಡಿದ್ದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶುದ್ದೀಕರಣ.
  • ಪೊಲೀಸ್ ಬಿಗಿ ಭದ್ರತೆಯಲ್ಲಿ ನಡೆಯುತ್ತಿದ್ದ ಪ್ರಕಾಶ್ ರಾಜ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಧಿಕ್ಕಾರ.
prakash rai
\ಸಂವಾದ ನಡೆಸುತ್ತಿರುವ ಪ್ರಕಾಶ್ ರೈ.
ಶಿವಮೊಗ್ಗ: ಭದ್ರಾವತಿಯಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಸರ್ ಎಂವಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರಕಾಶ್‌ ರಾಜ್‌ ಅವರಿಗೆ ಧಿಕ್ಕಾರ ಕೂಗಿದರು, ಅವರು ಭೇಟಿ ನೀಡಿದ ಸ್ಥಳದಲ್ಲಿ ಗೋ ಮೂತ್ರ ಸಿಂಪಡಿಸಿ, ನೀರು ಹಾಕಿ ಶುದ್ಧೀಕರಣ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸರ್ ಎಂವಿ ಕಾಲೇಜು ವಿದ್ಯಾರ್ಥಿಗಳು ತುಕ್ಡೇ ಗ್ಯಾಂಗ್‌ನ ರುವಾರಿ ಎಂದು ಪ್ರಕಾಶ್ ರಾಜ್ ವಿರುದ್ಧ ಘೋಷಣೆ ಕೂಗಿದರು. ಕಾಲೇಜಿನ ವಿದ್ಯಾರ್ಥಿಗಳನ್ನು ಹೊರಗಿಟ್ಟು ಕಾರ್ಯಕ್ರಮ ನಡೆಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಭದ್ರಾವತಿಯ ಪ್ರಗತಿಪರ ಸಂಘಟನೆಗಳ ಒಕ್ಕೂಟವು 'ರಂಗಭೂಮಿ, ಸಿನಿಮಾ ಮತ್ತು ಸಮಾಜ' ವಿಷಯದ ಸಂಬಂಧ ಸಂವಾದ ಆಯೋಜಿಸಿತ್ತು.

ಮೋದಿ ದೇವರಲ್ಲ, ಐದು ವರ್ಷ ಅಧಿಕಾರ ಕೊಟ್ಟ ಮೇಲೆ ಪ್ರಶ್ನೆ ಕೇಳೋ ಅಧಿಕಾರ ಇದೆ: ಪ್ರಕಾಶ್ ರೈ

ಪೊಲೀಸ್‌ ಬಿಗಿ ಭದ್ರತೆಯಲ್ಲಿ ಕಾರ್ಯಕ್ರಮ

ಪೊಲೀಸ್ ಬಿಗಿ ಭದ್ರತೆಯಲ್ಲಿ ನಡೆಯುತ್ತಿದ್ದ ಪ್ರಕಾಶ್ ರಾಜ್ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದರು. ಅವರು ಒಳನುಗ್ಗದಂತೆ ಪೊಲೀಸರು ತಡೆದರು. ಬ್ಯಾರೀಕೇಡ್ ಹಾಕಿ, ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಪೊಲೀಸರು ತಡೆದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಾಥ್‌ ನೀಡಿದರು. ಪೊಲೀಸರ ಜೊತೆ ತೀವ್ರ ವಾಗ್ವಾದ ನಡೆಯಿತು. ಈ ವೇಳೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದರು.

ವಿದ್ಯಾರ್ಥಿಗಳು ಗೋಮೂತ್ರ ಹಾಕಿ ಶುದ್ದೀಕರಣ

ಪ್ರಕಾಶ್ ರಾಜ್ ಭೇಟಿ ನೀಡಿದ್ದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶುದ್ದೀಕರಣ ಮಾಡಿದರು. ಗೋ ಮೂತ್ರ ಮತ್ತು ನೀರು ಹಾಕಿ ಶುದ್ಧೀಕರಣ ನಡೆಸಿದರು. ಇದು ಪ್ರಕಾಶ್ ರಾಜ್ ಓಡಾಡಿದ ಜಾಗ ಎಂದು ಶುದ್ಧೀಕರಿಸಿದರು. ಸರ್ ಎಂವಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಕಾಶ್ ರಾಜ್ ಭಾಗಿಯಾಗಿದ್ದರು.

ವೋಟ್ ಹಾಕಿದರೂ, ಹಾಕದೇ ಇದ್ದರೂ ಪ್ರಶ್ನೆ ಮಾಡುವ ಅಧಿಕಾರ ಇದೆ

ಬಹುಭಾಷಾ ನಟ ಪ್ರಕಾಶ್ ರಾಜ್‌ ಅವರು ಶಿವಮೊಗ್ಗದಲ್ಲಿ ಪ್ರತಕರ್ತರ ಜತೆಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದಾರೆ.

ಶಿವಮೊಗ್ಗದ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿರುವ ನಟ ಪ್ರಕಾಶ್ ರಾಜ್‌ ಅವರು, ' ಮಾನವೀಯತೆ ತುಳಿಯುವವರ ವಿರುದ್ಧ ನಾವು ಪ್ರೀತಿಯಿಂದ ನಿಲ್ಲುತ್ತಿದ್ದೇವೆ. ನಮಗೆ ದ್ವೇಷ ಬೇಕಿಲ್ಲ, ನಮಗೆ ಬೇಕಿರೋದು ಪ್ರೀತಿ. ಎಲ್ಲರಲ್ಲೂ ಸಮಾನತೆ ಇರಬೇಕು. ನಮ್ಮ ಕ್ರೌರ್ಯ, ವಿರೋಧ ದೇಶ ಹಾಳಾಗಲು ಕಾರಣವಾಗುತ್ತದೆ. ರಾಜ್ಯ ಗ್ಯಾರಂಟಿ ಯೋಜನೆಗಳು ಜನಪರವಾಗಿವೆ. ಇದರಿಂದ ಜನರಿಗೆ ಒಳ್ಳೆಯದಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಗಳ ವಿರೋಧಿಸಿದ್ದಾರೆ. ಅವರ ಯೋಜನೆಗಳೇ ದೇಶದಲ್ಲಿ ಫೇಲ್ಯೂರ್ ಆಗಿವೆ. ಈ ಬಗ್ಗೆ ಮಾತನಾಡುವವರು ಯಾರು? ಅವರದ್ದು 5 ವರ್ಷ ಮುಗಿಯುತ್ತೆ ಅವರೇನು ದೇವರಲ್ಲ. ನಿಮಗೆ ನಾನು ವೋಟ್ ಹಾಕಿದರೂ, ಹಾಕದೇ ಇದ್ದರೂ ಪ್ರಶ್ನೆ ಮಾಡುವ ಅಧಿಕಾರ ಇದೆ' ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.
 ಜಯಪ್ರಕಾಶ್‌ ಬಿರಾದಾರ್‌
ಲೇಖಕರ ಬಗ್ಗೆ
ಜಯಪ್ರಕಾಶ್‌ ಬಿರಾದಾರ್‌
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಆರು ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ಆರೋಗ್ಯ, ಅರಣ್ಯ, ಸಾರಿಗೆ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೊಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.... ಇನ್ನಷ್ಟು ಓದಿ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ