ಆ್ಯಪ್ನಗರ

ಯಶಸ್ಸಿಗೆ ಜೀವನ ಕೌಶಲ ಅಗತ್ಯ

ಜೀವನ ಕೌಶಲ ರೂಢಿಸಿಕೊಂಡರೆ, ವಿದ್ಯಾರ್ಥಿಗಳು ಸುಲಭವಾಗಿ ಯಶಸ್ಸು ಗಳಿಸಲು ಸಾಧ್ಯ ಎಂದು ಪಿಇಎಸ್‌ ಟ್ರಸ್ಟ್‌ನ ಟ್ರಸ್ಟಿ ಎಸ್‌.ವೈ.ಅರುಣಾದೇವಿ ಹೇಳಿದರು.

Vijaya Karnataka 24 Dec 2018, 5:00 am
ಶಿವಮೊಗ್ಗ: ಜೀವನ ಕೌಶಲ ರೂಢಿಸಿಕೊಂಡರೆ, ವಿದ್ಯಾರ್ಥಿಗಳು ಸುಲಭವಾಗಿ ಯಶಸ್ಸು ಗಳಿಸಲು ಸಾಧ್ಯ ಎಂದು ಪಿಇಎಸ್‌ ಟ್ರಸ್ಟ್‌ನ ಟ್ರಸ್ಟಿ ಎಸ್‌.ವೈ.ಅರುಣಾದೇವಿ ಹೇಳಿದರು.
Vijaya Karnataka Web success needs life skills
ಯಶಸ್ಸಿಗೆ ಜೀವನ ಕೌಶಲ ಅಗತ್ಯ


ಇಲ್ಲಿನ ಪಿಇಎಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಅಡ್ವಾನ್ಸ್‌ಡ್‌ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ಅಂತರ ಕಾಲೇಜು ಮಟ್ಟದ ಪ್ರೇರಣ ಜ್ಞಾನ ಸಂಗ್ರಾಮ್‌-2018ರ ಸಮಾರೋಪದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಗಟ್ಟಿತನ ಬೆಳೆಸಿಕೊಳ್ಳಬೇಕು. ದೈಹಿಕ ಸಾಮರ್ಥ್ಯ‌ ಹಾಗೂ ಮಾನಸಿಕ ದೃಢತೆ ಮೈಗೂಡಿಸಿಕೊಳ್ಳಬೇಕು. ಜತೆಗೆ ಇಂತಹ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ಸರ್ವತೋಮುಖವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

7 ವಿವಿಧ ಸ್ಪರ್ಧೆಗಳಲ್ಲಿ ಒಟ್ಟು 13 ಕಾಲೇಜುಗಳಿಂದ ಸುಮಾರು 250 ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆ ಪ್ರದರ್ಶಿಸಿದರು. ಚಾಂಪಿಯನ್‌ಶಿಪ್‌ ಟ್ರೋಫಿಯನ್ನು ಜ್ಞಾನದೀಪ ಪದವಿ ಪೂರ್ವ ಕಾಲೇಜು, ರನ್ನರ್‌ ಟ್ರೋಫಿಯನ್ನು ಅರಬಿಂದೋ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಾಯಿಲತಾ ಅಧ್ಯಕ್ಷ ತೆ ವಹಿಸಿದ್ದರು. ಪಿಇಎಸ್‌ ಟ್ರಸ್ಟ್‌ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ.ಆರ್‌.ನಾಗರಾಜ್‌ ಮಾತನಾಡಿದರು. ನಿರ್ವಹಣಾ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಕೇಶ್‌ ಡಿಸೋಜಾ, ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಮುಖ್ಯಸ್ಥೆ ಡಿ.ಎಸ್‌.ರೂಪ ಇತರರಿದ್ದರು.

ಎಂ.ಕಾಂ ವಿಭಾಗ ಸಂಚಾಲಕ ಎಸ್‌.ಆರ್‌ ನಾಗರಾಜ್‌ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಜಿ. ಶಾರದಾ, ಪವನ್‌ ಧನಂಜಯ್‌ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಮಿಥುನ್‌ ಡಿಸೋಜಾ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ