ಆ್ಯಪ್ನಗರ

‘ಸ್ಪರ್ಧಾ ಮನೋಭಾವದಿಂದ ಯಶಸ್ಸು ’

ಸ್ಪರ್ಧಾ ಮನೋಭಾವದಿಂದ ಮುನ್ನುಗ್ಗಿದಲ್ಲಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಿಕ್ಷ ಕ ವಿ.ಡಿ.ನಾಗರಾಜ ಹೇಳಿದರು.

Vijaya Karnataka 7 Dec 2018, 10:11 pm
ಹೊಸನಗರ: ಸ್ಪರ್ಧಾ ಮನೋಭಾವದಿಂದ ಮುನ್ನುಗ್ಗಿದಲ್ಲಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಿಕ್ಷ ಕ ವಿ.ಡಿ.ನಾಗರಾಜ ಹೇಳಿದರು.
Vijaya Karnataka Web success with competitive attitude
‘ಸ್ಪರ್ಧಾ ಮನೋಭಾವದಿಂದ ಯಶಸ್ಸು ’


ತಾಲೂಕಿನ ಸೊನಲೆ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಹಳೆ ವಿದ್ಯಾರ್ಥಿಗಳ ಸಂಘ ಏರ್ಪಡಿಸಿದ್ದ 5ನೇ ವರ್ಷದ ಪ್ರತಿಭಾನ್ವೇಷಣೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆಯಿರುತ್ತದೆ. ಸುಪ್ತವಾಗಿರುವ ಪ್ರತಿಭೆ ಹೊರಹೊಮ್ಮಲು ಪೂರಕ ವ್ಯವಸ್ಥೆ ನಿರ್ಮಾಣವಾಗಬೇಕು. ಮಕ್ಕಳಿಗೆ ಎಳವೆಯಿಂದಲೇ ಸ್ಪರ್ಧಾತ್ಮಕ ಮನೋಭಾವ ಬೆಳೆಯಬೇಕೆಂದರು. ಮುಖ್ಯ ಶಿಕ್ಷ ಕ ಪ್ರವೀಣ್‌ ಅಧ್ಯಕ್ಷ ತೆ ವಹಿಸಿದ್ದರು. ಶಾಲೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಜ್ಞಾಪಕ ಶಕ್ತಿ ಪರೀಕ್ಷೆ ಸೇರಿದಂತೆ ವಿವಿಧ ಕಾರ‍್ಯಕ್ರಮ ಏರ್ಪಡಿಸಲಾಗಿತ್ತು. ವಿಷಯವಾರು ಭಾಷಣ ಸ್ಪರ್ಧೆ ಹಾಗೂ ಮನೋರಂಜನಾ ಚಟುವಟಿಕೆ ನಡೆಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಶೋಕ ಸ್ವಾಗತಿಸಿ, ಜೆ.ಸಿ.ಪ್ರವೀಣ್‌ ವಂದಿಸಿ, ಕೆ.ಪ್ರವೀಣ್‌ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ