ಆ್ಯಪ್ನಗರ

ನಿರಂತರ ಪರಿಶ್ರಮದಿಂದ ಯಶಸ್ಸು

ಶಿಕ್ಷ ಕರು ಹಾಗೂ ಆಡಳಿತ ಸಮಿತಿಯವರು ಸ್ವಂತ ಖರ್ಚಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಉಚಿತ ಸಮವಸ್ತ್ರ ನೀಡುತ್ತಿರುವುದು ಮಹತ್ವದ ಸೇವೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಧುರಾಯ್‌ ಜಿ.ಶೇಟ್‌ ಅಭಿಪ್ರಾಯಪಟ್ಟರು.

Vijaya Karnataka 24 Jul 2019, 5:00 am
ಸೊರಬ : ಶಿಕ್ಷ ಕರು ಹಾಗೂ ಆಡಳಿತ ಸಮಿತಿಯವರು ಸ್ವಂತ ಖರ್ಚಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಉಚಿತ ಸಮವಸ್ತ್ರ ನೀಡುತ್ತಿರುವುದು ಮಹತ್ವದ ಸೇವೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಧುರಾಯ್‌ ಜಿ.ಶೇಟ್‌ ಅಭಿಪ್ರಾಯಪಟ್ಟರು.
Vijaya Karnataka Web SMR-23SRBP1


ಪಟ್ಟಣದ ಶ್ರೀರಂಗನಾಥ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಉಚಿತ ಸಮವಸ್ತ್ರ ವಿತರಣೆ ಹಾಗೂ ವಿದ್ಯಾರ್ಥಿಗಳ ಸಂಘ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಓದಿನ ಜತೆಗೆ ಸಂಸ್ಕಾರ ಬೆಳೆಸಿಕೊಳ್ಳಬೇಕು. ಗುರು-ಹಿರಿಯರನ್ನು ಗೌರವಿಸುವ ಮನೋಭಾವ ಹೊಂದಬೇಕು. ನಿರಂತರ ಶ್ರಮಿಸಿದ್ದಲ್ಲಿ ಯಶಸ್ಸು ಹೆಗಲೇರುವುದು ಖಚಿತವಾಗಿದ್ದು ವಿದ್ಯಾರ್ಥಿಗಳು ಸಮಗ್ರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಶಾಲಾ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಅಧ್ಯಕ್ಷ ತೆ ವಹಿಸಿ ಮಾತನಾಡಿ, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಭಾಷಣಗಳನ್ನು ಕೃತಿಗಳನ್ನಾಗಿಸಿದಾಗ ಅಭಿವೃದ್ಧಿ ಸಾಧ್ಯ. ಖಾಸಗಿ ಶಾಲೆಗಳಲ್ಲಿನ ಇಂಗ್ಲಿಷ್‌ ಮಾಧ್ಯಮಕ್ಕೆ ಕಡಿವಾಣ ಹಾಕುವ ಬದಲಾಗಿ ಸರಕಾರಿ ಶಾಲೆಗಳಲ್ಲಿಯೂ ಇಂಗ್ಲಿಷ್‌ ಮಾಧ್ಯಮ ಆರಂಭಿಸಿದ್ದು ನಾಡಿನ ಅನನ್ಯತೆಗೆ ಮಾಡಿದ ದ್ರೋಹ. ಸರಕಾರ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೂ ಸಮವಸ್ತ್ರ ನೀಡಬೇಕು ಎಂದು ಆಗ್ರಹಿಸಿದ ಅವರು, ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಇದುವರೆಗೂ ವೈಯಕ್ತಿಕವಾಗಿ 2001 ರೂ. ನೀಡುತ್ತಿದ್ದು, ಈ ವರ್ಷದಿಂದ 3001 ರೂ. ನೀಡುವುದಾಗಿ ಭರವಸೆ ನೀಡಿದರು.

ಕನ್ನಡ ಜಾನಪದ ಪರಿಷತ್‌ ಅಧ್ಯಕ್ಷ ಎಸ್‌.ಎಂ.ನೀಲೇಶ್‌ ಶಾಲೆ ಶೈಕ್ಷ ಣಿಕ ವರ್ಷದ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಶಿಕ್ಷ ಕ ಮಲ್ಲಿಕಾರ್ಜುನ, ಶಿಕ್ಷ ಕರಾದ ರಮೇಶ್‌, ರುದ್ರಮುನಿ, ಪರಶುರಾಮ್‌, ಕಲಾಧರೆ, ಪೂಜಾ ಮತ್ತಿತರರು ಹಾಜರಿದ್ದರು. ಭುವನೇಶ್ವರಿ ಮತ್ತು ಸಂಗಡಿಗರು ಪ್ರಾರ್ಥಿಸಿ, ಶಿಕ್ಷ ಕ ಮಾಲತೇಶ್‌ ಸ್ವಾಗತಿಸಿದರು. ರಂಗನಾಥ್‌ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷ ಕ ಸಿ.ಪಿ.ಈಶ್ವರಪ್ಪ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ