ಆ್ಯಪ್ನಗರ

ಯುವತಿ ಅನುಮಾನಾಸ್ಪದ ಸಾವು

ಹಾಸ್ಟೆಲ್‌ ಒಂದರಲ್ಲಿ ಅಡುಗೆಯವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಪಟ್ಟಣದ ಕಾನಕೇರಿಯಲ್ಲಿ ನಡೆದಿದೆ.

Vijaya Karnataka 16 Jul 2019, 5:00 am
ಸೊರಬ: ಹಾಸ್ಟೆಲ್‌ ಒಂದರಲ್ಲಿ ಅಡುಗೆಯವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಪಟ್ಟಣದ ಕಾನಕೇರಿಯಲ್ಲಿ ನಡೆದಿದೆ.
Vijaya Karnataka Web SMR-15SRBP2


ಅಶ್ವಿನಿ ಕಲ್ಲಹಳ್ಳಿ(22) ಮೃತಪಟ್ಟವರು. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿಯ ರಾಮನಗರ ನಿವಾಸಿಯಾದ ಅಶ್ವಿನಿ ಅವರು, 2018ರ ಜೂ.23ರಿಂದ ಪಟ್ಟಣದ ಕಾನಕೇರಿಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾನಕೇರಿಯ ಬಾಡಿಗೆ ಮನೆಯೊಂದರಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು.

ಜು.14ರ ಸಂಜೆ ಎಂದಿನಂತೆ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಸಾಗಿದ್ದರು ಎಂದು ತಿಳಿದು ಬಂದಿದೆ. ಜತೆಯಲ್ಲಿದ್ದ ಯುವತಿ ಕೂಡಾ ಬೇರೊಂದು ಹಾಸ್ಟೆಲ್‌ನಲ್ಲಿ ಅಡುಗೆ ಸಿಬ್ಬಂದಿಯಾಗಿದ್ದು, ಅವರು ಕೆಲಸದ ನಿಮಿತ್ತ ರಾತ್ರಿ ಹಾಸ್ಟೆಲ್‌ನಲ್ಲಿಯೇ ಉಳಿದಿದ್ದರು. ಸೋಮವಾರ ಬೆಳಗ್ಗೆ ಮನೆಗೆ ಬಂದು ನೋಡಿದಾಗ ಅಶ್ವಿನಿ ಕಲ್ಲಹಳ್ಳಿ ಮೃತಪಟ್ಟಿರುವುದು ಕಂಡುಬಂದಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳದವರು ಭೇಟಿ ನೀಡಿ ಪರಿಶೀಲಿಸಿದರು. ಯುವತಿ ಮೊಬೈಲ್‌ ಬಳಸುತ್ತಿದ್ದು, ಅದು ಸ್ಥಳದಲ್ಲಿ ಪತ್ತೆಯಾಗಿಲ್ಲ. ಪಟ್ಟಣದ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ