ಆ್ಯಪ್ನಗರ

ಪರಿಸರ ಸ್ನೇಹಿ ಬ್ಯಾಂಕಿಂಗ್‌ ಕ್ಷೇತ್ರದಿಂದ ಸುಸ್ಥಿರ ಅಭಿವೃದ್ಧಿ

ನೈಸರ್ಗಿಕ ಸಂಪನ್ಮೂಲಗಳ ಮಿತಬಳಕೆ ಮತ್ತು ಸುಸ್ಥಿರ ಅಭಿವೃದ್ಧಿ ಮಾದರಿ ಹೊಂದುವ ಮೂಲಕ ಬ್ಯಾಂಕಿಂಗ್‌ ಮತ್ತು ವಾಣಿಜ್ಯ ಕ್ಷೇತ್ರಗಳು ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕಿದೆ ಎಂದು ಮೈಸೂರು ವಿವಿ ಪ್ರಾಧ್ಯಾಪಕ ಡಾ. ಜಿ. ಕೊಟ್ರೇಶ್ವರ್‌ ಅಭಿಪ್ರಾಯಪಟ್ಟರು.

Vijaya Karnataka 27 Mar 2019, 5:00 am
ಶಿವಮೊಗ್ಗ : ನೈಸರ್ಗಿಕ ಸಂಪನ್ಮೂಲಗಳ ಮಿತಬಳಕೆ ಮತ್ತು ಸುಸ್ಥಿರ ಅಭಿವೃದ್ಧಿ ಮಾದರಿ ಹೊಂದುವ ಮೂಲಕ ಬ್ಯಾಂಕಿಂಗ್‌ ಮತ್ತು ವಾಣಿಜ್ಯ ಕ್ಷೇತ್ರಗಳು ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕಿದೆ ಎಂದು ಮೈಸೂರು ವಿವಿ ಪ್ರಾಧ್ಯಾಪಕ ಡಾ. ಜಿ. ಕೊಟ್ರೇಶ್ವರ್‌ ಅಭಿಪ್ರಾಯಪಟ್ಟರು.
Vijaya Karnataka Web sustainable development from the eco friendly banking sector
ಪರಿಸರ ಸ್ನೇಹಿ ಬ್ಯಾಂಕಿಂಗ್‌ ಕ್ಷೇತ್ರದಿಂದ ಸುಸ್ಥಿರ ಅಭಿವೃದ್ಧಿ


ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದಿಂದ ಮಂಗಳವಾರ ವಿವಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುಸ್ಥಿರ ಅಭಿವೃದ್ಧಿಯ ಆದ್ಯತೆಗಳಲ್ಲಿ ಹಸಿರು ಬ್ಯಾಂಕಿಂಗ್‌ ಮತ್ತು ಹಣಕಾಸು ವ್ಯವಹಾರಗಳ ಪಾತ್ರ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಬಂಡವಾಳ, ಉದ್ಯಮ, ಮಾರುಕಟ್ಟೆಗಳು ಕೇವಲ ಲಾಭಗಳಿಕೆಯ ಏಕಮಾತ್ರ ಉದ್ದೇಶದಿಂದ ಹೊರಬಂದು ಪರಿಸರ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಉಳಿಸಿ ಬೆಳೆಸುವ ಆಶಯಗಳಿಗೆ ಅನುಗುಣವಾಗಿರಬೇಕು. ಈ ಮೂಲಕ ಸುಸ್ಥಿರ ಅಭಿವೃದ್ಧಿ ಸಾಧಿಸುವಂತಾಗಬೇಕು ಎಂದರು.

ವಿವಿ ಕುಲಪತಿ ಪ್ರೊ.ಜೋಗನ್‌ ಶಂಕರ್‌ ಮಾತನಾಡಿ, ವಾಣಿಜ್ಯ ಕ್ಷೇತ್ರವು ಪರಿಸರ ಸ್ನೇಹಿ ಕ್ರಮಗಳ ಜತೆಗೆ ಮಾನವೀಯ ಮೌಲ್ಯಗಳನ್ನು ಒಳಗೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ರೈತರ ಬೆಳೆಗಳಿಗೆ ಸೂಕ್ತ ದರ, ವಿಮೆ ಸಹಾಯ ಮತ್ತು ಆತ್ಮಹತ್ಯೆ ಸಮಸ್ಯೆಗಳಿಗೆ ಪರಿಹಾರ ದೊರೆತಿಲ್ಲ. ಈ ಕುರಿತಂತೆ ಪರ್ಯಾಯ ಆರ್ಥಿಕ ಮಾರ್ಗೋಪಾಯಗಳನ್ನು ಹುಡುಕುವ ಮೂಲಕ ವ್ಯವಹಾರ ನಿರ್ವಹಣಾ ಕ್ಷೇತ್ರವು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆಯಬೇಕು ಎಂದು ಸಲಹೆ ನೀಡಿದರು.

ವಾಣಿಜ್ಯಶಾಸ್ತ್ರ ವಿಭಾಗದ ಡೀನ್‌ ಪ್ರೊ. ಆರ್‌.ಹಿರೇಮಣಿನಾಯ್ಕ ಮಾತನಾಡಿ, ಬ್ಯಾಂಕಿಂಗ್‌ ಮತ್ತು ಹಣಕಾಸು ಕ್ಷೇತ್ರಗಳು ಕಾಗದರಹಿತ ವ್ಯವಹಾರದತ್ತ ನಡೆದಿದ್ದು, ದೇಶದ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸಿವೆ. ಮುಂದಿನ ಹಂತದಲ್ಲಿ ಮಿತಬಳಕೆ ಮತ್ತು ಮರುಬಳಕೆ ಸೂತ್ರದೊಂದಿಗೆ, ಸೌರಶಕ್ತಿ, ಪವನಶಕ್ತಿಗಳನ್ನು ಅಳವಡಿಸಿಕೊಂಡು ಮತ್ತಷ್ಟು ಪರಿಸರ ಸ್ನೇಹಿ ಬದ್ಧತೆಯನ್ನು ಎತ್ತಿಹಿಡಿಯಬೇಕು ಎಂದರು.

ವಾಣಿಜ್ಯಶಾಸ್ತ್ರ ವಿಭಾಗದ ಅಧ್ಯಕ್ಷ ಡಾ.ಎಸ್‌.ವೆಂಕಟೇಶ್‌, ಎಂ.ಬಿ.ಎ. ವಿಭಾಗದ ಡಾ. ಮಂಜುನಾಥ್‌, ಡಾ.ರಮೇಶ್‌ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ