ಆ್ಯಪ್ನಗರ

ಜೆಎನ್‌ಯು ಹಲ್ಲೆಕೋರರ ವಿರುದ್ಧ ಕ್ರಮಕೈಗೊಳ್ಳಿ

ಪಟ್ಟಣದ ತಾಲೂಕು ಕಚೇರಿ ಮುಂಭಾಗ ಯುವ ಕಾಂಗ್ರೆಸ್‌ ಹಾಗೂ ಎನ್‌ಎಸ್‌ಯುಐ ವತಿಯಿಂದ ದಿಲ್ಲಿಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಪಟ್ಟರಾಜ ಗೌಡ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 8 Jan 2020, 5:00 am
ಸೊರಬ: ಪಟ್ಟಣದ ತಾಲೂಕು ಕಚೇರಿ ಮುಂಭಾಗ ಯುವ ಕಾಂಗ್ರೆಸ್‌ ಹಾಗೂ ಎನ್‌ಎಸ್‌ಯುಐ ವತಿಯಿಂದ ದಿಲ್ಲಿಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಪಟ್ಟರಾಜ ಗೌಡ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web 07SRBP3_46
ಸೊರಬದಲ್ಲಿಯುವ ಕಾಂಗ್ರೆಸ್‌ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಮಂಗಳವಾರ ದಿಲ್ಲಿಯ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮನವಿ ರಾಷ್ಟ್ರಪತಿಗೆ ಮಾಡಿದರು.


ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಂ.ಕರುಣಾಕರ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲೆ ಹಲ್ಲೆನಡೆಸಿರುವ ಕ್ರಮ ಖಂಡನೀಯ. ಹಾಸ್ಟೆಲ್‌ ಶುಲ್ಕ ಹೆಚ್ಚಳ, ಪೌರತ್ವ ತಿದ್ದುಪಡಿ ಕಾಯಿದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿಚಾರಗಳನ್ನು ವಿರೋಧಿಸಿ ಜೆಎನ್‌ಯುನಲ್ಲಿಕಳೆದೆರಡು ತಿಂಗಳಿನಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಅವರ ಮೇಲೆ ಹಲ್ಲೆನಡೆಸಲಾಗಿದೆ. ಇದು ಅತ್ಯಂತ ಕ್ರೂರ ಘಟನೆ ಎಂದರು.

ಪ್ರತಿಭಟನೆಯಲ್ಲಿಎನ್‌ಎಸ್‌ಯುಐ ಉಪಾಧ್ಯಕ್ಷ ಎನ್‌.ಜಿ. ಸಂಜಯ್‌, ಜೆ.ಕೆ. ಅವಿನಾಶ್‌, ಸಿ.ಎ. ನಾಗರಾಜ್‌, ಎಂ.ಎಸ್‌. ವಿನಯ್‌, ಎಚ್‌.ಎನ್‌. ಪ್ರವೀಣ್‌ ಸೇರಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

---------
ಪುನರಾವರ್ತತೆ ಆಘಾತಕಾರಿ
ಎನ್‌ಎಸ್‌ಯುಐ ತಾಲೂಕು ಅಧ್ಯಕ್ಷ ಎನ್‌.ಡಿ.ಆಶಿರ್ವಾದ್‌ ಮಾತನಾಡಿ, ಕೇಂದ್ರದಲ್ಲಿಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಇಂತಹ ಘಟನೆಗಳು ಪುನರಾವರ್ತಿತವಾಗುತ್ತಿರುವುದು ಆಘಾತಕಾರಿಯಾಗಿದೆ. ಇದಕ್ಕೆ ಬಿಜೆಪಿ ಮತ್ತು ಸಂಘಪರಿವಾರದವರ ಬೆಂಬಲವೂ ಇದೆ. ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯೋ, ಸರ್ವಾಧಿಕಾರಿ ವ್ಯವಸ್ಥೆಯೋ ಎನ್ನುವ ಅನುಮಾನ ಮೂಡುತ್ತಿದೆ. ದೇಶದಲ್ಲಿಉಂಟಾಗುತ್ತಿರುವ ಪ್ರಕ್ಷುಬ್ಧ ಪರಿಸ್ಥಿತಿ ಸರಿಮಾಡಲು ರಾಷ್ಟ್ರಪತಿಗಳು ಸೂಕ್ತ ಕ್ರಮಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ