ಆ್ಯಪ್ನಗರ

ಸಂಘಟನೆ ದುರ್ಬಳಕೆ ವಿರುದ್ಧ ಕ್ರಮ ಕೈಗೊಳ್ಳಿ

ಕರ್ನಾಟಕ ರಕ್ಷ ಣಾ ವೇದಿಕೆ ಸಂಘಟನೆ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷ ಣಾ ವೇದಿಕೆ ಕಾರ್ಯಕರ್ತರು ಬುಧವಾರ ಜಿಲ್ಲಾ ರಕ್ಷ ಣಾಧಿಕಾರಿಗೆ ಮನವಿ ಸಲ್ಲಿಸಿದರು.

Vijaya Karnataka 7 Mar 2019, 5:00 am
ಶಿವಮೊಗ್ಗ: ಕರ್ನಾಟಕ ರಕ್ಷ ಣಾ ವೇದಿಕೆ ಸಂಘಟನೆ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷ ಣಾ ವೇದಿಕೆ ಕಾರ್ಯಕರ್ತರು ಬುಧವಾರ ಜಿಲ್ಲಾ ರಕ್ಷ ಣಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web SMR-6ganesh4


ಕರ್ನಾಟಕ ರಕ್ಷ ಣಾ ವೇದಿಕೆಯ ಅಧಿಕೃತ ರಾಜ್ಯಾಧ್ಯಕ್ಷ ರಾಗಿ ಟಿ.ವಿ.ನಾರಾಯಣಗೌಡರು ಇದ್ದಾರೆ. ಸರಕಾರದ ನಿಯಮಗಳಂತೆ ಸಂಘಟನೆಯು ಸಂಘಗಳ ನೋಂದಣಿ ಅಧಿನಿಯಮದ ಪ್ರಕಾರವೇ ನಡೆಯುತ್ತಿದೆ. 18 ವರ್ಷ ಕಾಲ ಸಂಘ ಕಾರ್ಯನಿರ್ವಹಿಸುತ್ತಾ ಬಂದಿದೆ. ಲಕ್ಷಾಂತರ ಸದಸ್ಯರು ಇಲ್ಲಿ ನೋಂದಣಿಯಾಗಿದ್ದಾರೆ. ಬೈಲಾ ಪ್ರಕಾರವೇ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಕೆಲವರು ಸಂಘಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಸಂಘದ ಹೆಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇಂತಹವರ ವಿರುದ್ದ ನ್ಯಾಯಾಲಯದಲ್ಲಿ ಶಾಶ್ವತ ನಿರ್ಬಂಧಕಾಜ್ಞೆಯ ದಾವೆ ಹೂಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಕ್ಷ ಣಾ ವೇದಿಕೆಯ ಲಾಂಛನ ಸಹ ನೋಂದಣಿ ಮಾಡಿಸಲಾಗಿದೆ. ಸಂಘಟನೆ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ಮಾಡಿರುವ ನೋಂದಾವಣೆ ರದ್ದುಪಡಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಜಿಲ್ಲಾಧ್ಯಕ್ಷ ಮಂಜುನಾಥ್‌ ಎಸ್‌.ಕೋಟ್ಯನ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ