ಆ್ಯಪ್ನಗರ

‘ಜ್ಞಾನಾರ್ಜನೆಗೆ ತಂತ್ರಜ್ಞಾನ ಬಳಸಿ’

ಜ್ಞಾನದ ಅರಿವಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ವಿಧಾನಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಹೇಳಿದರು.

Vijaya Karnataka 29 Jul 2018, 5:00 am
ಶಿವಮೊಗ್ಗ : ಜ್ಞಾನದ ಅರಿವಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ವಿಧಾನಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಹೇಳಿದರು.
Vijaya Karnataka Web 28SMG4


ನಗರದ ಜೆಪಿಎನ್‌ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಬಹುಪಾಲು ವಿದ್ಯಾರ್ಥಿಗಳು ಜ್ಞಾನದ ಸದ್ಬಳಕೆಯ ಕೊರತೆಯಿಂದ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಜ್ಞಾನದ ಅರಿವು ವೃದ್ಧಿಯಾದಾಗ ಜೀವನದಲ್ಲಿ ಗುರಿಮುಟ್ಟಲು ಸಾಧ್ಯ ಎಂದರು.

ಕಂಪ್ಯೂಟರ್‌, ಮೊಬೈಲ್‌ ಮೊದಲಾದ ಆಧುನಿಕ ಸೌಲಭ್ಯದಿಂದ ನಮಗೆ ಒಳಿತು, ಕೆಡಕು ಎರಡು ಆಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಎಚ್ಚರವಹಿಸಿ ಬಳಕೆ ಮಾಡುವ ಮೂಲಕ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕಿದೆ ಎಂದರು.

ತಂತ್ರಜ್ಞಾನ ದುರುಪಯೋಗಪಡಿಸಿಕೊಳ್ಳಬಾರದು. ಜ್ಞಾನಾರ್ಜನೆಗೆ ತಂತ್ರಜ್ಞಾನ ಬಳಕೆಯಾದರೆ ಅನುಕೂಲವಾಗುತ್ತದೆ. ಜತೆಗೆ ಸಮಾಜಕ್ಕೂ ಒಳ್ಳೆಯದಾಗುತ್ತದೆ ಎಂದರು.

ಬಡತನ ಸಾಧನೆಗೆ ಅಡ್ಡಿಯಾಗಬಾರದು. ಎಪಿಜೆ ಅಬ್ದುಲ್‌ ಕಲಾಂ ಸೇರಿದಂತೆ ಹಲವು ಗಣ್ಯರು ಬಡತನದಲ್ಲಿ ವಿದ್ಯಾಭ್ಯಾಸ ಪೂರೈಸಿ ಸಾಧನೆ ತೋರಿದ್ದಾರೆ. ಜಿಲ್ಲೆಯಲ್ಲೂ ಅನೇಕರು ಬಡತನದಲ್ಲಿ ವಿದ್ಯಾಭ್ಯಾಸ ನಡೆಸಿ ಸಾಕಷ್ಟು ಹೆಸರು ಪಡೆದಿದ್ದಾರೆ. ಇಂತಹವರನ್ನು ಮಾದರಿಯಾಗಿಟ್ಟುಕೊಳ್ಳಬೇಕೆಂದು ಸಲಹೆ ನೀಡಿದರು.

ಶಿಕ್ಷ ಣವೇ ಬದುಕನ್ನು ರೂಪಿಸಬೇಕು. ನಾವು ಪಡೆದ ಶಿಕ್ಷ ಣ ಸಮಾಜಕ್ಕೆ ಉಪಯೋಗವಾಗಬೇಕು ಎಂದರು.

ವೇದಿಕೆಯಲ್ಲಿ ಎನ್‌ಇಎಸ್‌ ಕಾರ್ಯದರ್ಶಿ ಎಸ್‌.ಎನ್‌.ನಾಗರಾಜ್‌, ಪಾಲಿಕೆ ಸದಸ್ಯ ಎಸ್‌.ರಮೇಶ್‌, ಕೋಣಂದೂರು ರಾಷ್ಟ್ರೀಯ ಪದವಿಪೂರ್ವ ಕಾಲೇಜು ಪ್ರಭಾರ ಪ್ರಾಂಶುಪಾಲ ಎಚ್‌.ಎನ್‌.ನರಸಿಂಹಮೂರ್ತಿ ಭಾಗವಹಿಸಿದ್ದರು. ಕಾಲೇಜು ಪ್ರಾಚಾರ್ಯ ಬಿ.ಮಂಜಾನಾಯ್ಕ ಅಧ್ಯಕ್ಷ ತೆ ವಹಿಸಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ