ಆ್ಯಪ್ನಗರ

ತಡಸ ಶಾಲೆ ಚಾವಣಿ, ಗೋಡೆ ಕುಸಿತ

ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗುರುವಾರ ತಾಲೂಕಿನ ತಡಸ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚಾವಣಿ, ಗೋಡೆ ಸಂಪೂರ್ಣ ಕುಸಿದಿದೆ.

Vijaya Karnataka 9 Aug 2019, 5:00 am
ಭದ್ರಾವತಿ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗುರುವಾರ ತಾಲೂಕಿನ ತಡಸ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚಾವಣಿ, ಗೋಡೆ ಸಂಪೂರ್ಣ ಕುಸಿದಿದೆ.
Vijaya Karnataka Web SMR-8BDVT3


ಶಾಲೆ ಚಾವಣಿ ಕುಸಿದು ಮೇಜು, ಕುರ್ಚಿ ಹಾಗು ಕೆಲವು ಸಾಮಗ್ರಿಗಳು ಹಾನಿಗೊಂಡಿವೆ. ಶಾಸಕ ಬಿ.ಕೆ.ಸಂಗಮೇಶ್ವರ್‌, ತಹಸೀಲ್ದಾರ್‌ ಸೋಮಶೇಖರ್‌, ಇಸಿಒ ರವಿಕುಮಾರ್‌ ಮತ್ತು ಅಧಿಕಾರಿಗಳ ತಂಡ ಪರಿಶೀಲಿಸಿ, ಉಳಿದ ಪರಿಕರಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಶಾಲೆಗಳಿಗೆ ರಜೆ ಇದ್ದುದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಕಂದಾಯಾಧಿಕಾರಿ ಪ್ರಶಾಂತ್‌, ಪಿಡಿಒ, ಗ್ರಾಪಂ ಅಧ್ಯಕ್ಷ , ಸದಸ್ಯರಿದ್ದರು.

ಬೈಪಾಸ್‌ ರಸ್ತೆ ಸಂಪೂರ್ಣ ಜಲಾವೃತ : ಬಿಳಿಕಿ ಬೈಪಾಸ್‌ ರಸ್ತೆ ಸಂಪೂರ್ಣ ಜಲಾವೃತಗೊಂಡು ರಸ್ತೆಯ ಮೇಲೆ ನೀರು ನಿಂತ ಪರಿಣಾಮ ಕೆಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ತಹಸೀಲ್ದಾರ್‌ ಸೋಮಶೇಖರ್‌, ನಗರಸಭೆ ಪೌರಾಯುಕ್ತ ಮನೋಹರ್‌ ಹಾಗು ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಉಳಿದಂತೆ ನಗರ ಪ್ರದೇಶಗಳ ಮನೆಗಳ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು. ನಗರಸಭೆ ಹಾಗು ತಾಲೂಕು ಆಡಳಿತ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ