ಆ್ಯಪ್ನಗರ

ಶುದ್ಧ ನೀರಿನ ಘಟಕ ಉದ್ಘಾಟನೆ

ಶಿಕ್ಷ ಣಕ್ಕೆ ಒತ್ತು ನೀಡುವ ಉದ್ದೇಶದಿಂದ ಜಿಲ್ಲೆಯ ಎಲ್ಲ ಕಾಲೇಜುಗಳಿಗೆ ಮೂಲ ಸೌಕರ‍್ಯ ಒದಗಿಸಲು ಬದ್ಧರಾಗಿದ್ದು, ಆ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಎಲ್ಲ ಕಾಲೇಜುಗಳಿಗೆ ಒದಗಿಸಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

Vijaya Karnataka 21 Feb 2019, 5:00 am
ಸೊರಬ: ಶಿಕ್ಷ ಣಕ್ಕೆ ಒತ್ತು ನೀಡುವ ಉದ್ದೇಶದಿಂದ ಜಿಲ್ಲೆಯ ಎಲ್ಲ ಕಾಲೇಜುಗಳಿಗೆ ಮೂಲ ಸೌಕರ‍್ಯ ಒದಗಿಸಲು ಬದ್ಧರಾಗಿದ್ದು, ಆ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಎಲ್ಲ ಕಾಲೇಜುಗಳಿಗೆ ಒದಗಿಸಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
Vijaya Karnataka Web SMR-19srbp1


ಪಟ್ಟಣದ ಪದವಿಪೂರ್ವ ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಂಗಳವಾರ ಶುದ್ಧ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸದರ 1.5 ಕೋಟಿ ಅನುದಾನದಲ್ಲಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 52 ಶುದ್ಧ ನೀರಿನ ಘಟಕ ಸ್ಥಾಪಿಸುವ ಚಿಂತನೆ ಇದೆ. ಆ ನಿಟ್ಟಿನಲ್ಲಿ ಸೊರಬದ ಎರಡು ಕಾಲೇಜುಗಳಿಗೆ ಶುದ್ಧ ನೀರಿನ ಘಟಕ ತೆರೆಯಲಾಗಿದೆ ಎಂದರು.

ಶಾಲಾ-ಕಾಲೇಜುಗಳಿಗೆ ಮೂಲ ಸೌಲಭ್ಯ ಒದಗಿಸುವುದು ಜನ ಪ್ರತಿನಿಧಿಗಳ ಕರ್ತವ್ಯ. ಜಿಲ್ಲಾದ್ಯಂತ ಗುಣಮಟ್ಟದ ಶಿಕ್ಷ ಣ ದೊರೆಯಬೇಕೆಂಬುದು ನಮ್ಮ ಹಂಬಲ. ಅದಕ್ಕೆ ಬೇಕಾಗುವ ಸೌಕರ್ಯಗಳನ್ನು ಹಂತ ಹಂತವಾಗಿ ಒದಗಿಸಲು ಬದ್ಧ ಎಂದರು. ಶಾಸಕ ಕುಮಾರ ಬಂಗಾರಪ್ಪ, ಕೊಡಕಣಿ ಗ್ರಾಪಂ ಅಧ್ಯಕ್ಷೆ ಪಾರ್ವತಮ್ಮ, ಪ್ರಾಂಶುಪಾಲ ಸುರೇಶಪ್ಪ, ಕಾರಾರ‍ಯಧ್ಯಕ್ಷ ಕೃಷ್ಣಮೂರ್ತಿ, ಎಂ.ಡಿ.ಉಮೇಶ್‌, ದಿವಾಕರ ಬಾವೆ, ಶಿವಯೋಗಿ, ವೀರೇಶ್‌ ಮೇಸ್ತ್ರಿ, ಬಂಗಾರಪ್ಪ, ಚಂದ್ರಶೇಖರ, ವಿಶ್ವನಾಥ್‌, ಶಿವಾನಂದಪ್ಪ, ರಾಜಪ್ಪ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ