ಆ್ಯಪ್ನಗರ

ವಿಜೃಂಭಣೆಯ ಶಕ್ತಿ ದೇವತೆಗಳ ಸಮಾಗಮ

ನಗರದ ಕೋಟೆ ಶ್ರೀಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಎಳ್ಳಮಾವಾಸ್ಯೆ ಅಂಗವಾಗಿ ಶನಿವಾರ ವಿಶ್ವ ಹಿಂದೂ ಪರಿಷತ್‌ನಿಂದ 20ನೇ ವರ್ಷದ ಶಕ್ತಿ ದೇವತೆಗಳ ಸಮಾಗಮ ವಿಜೃಂಭಣೆಯಿಂದ ನೆರವೇರಿತು.

Vijaya Karnataka 6 Jan 2019, 5:00 am
ಶಿವಮೊಗ್ಗ: ನಗರದ ಕೋಟೆ ಶ್ರೀಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಎಳ್ಳಮಾವಾಸ್ಯೆ ಅಂಗವಾಗಿ ಶನಿವಾರ ವಿಶ್ವ ಹಿಂದೂ ಪರಿಷತ್‌ನಿಂದ 20ನೇ ವರ್ಷದ ಶಕ್ತಿ ದೇವತೆಗಳ ಸಮಾಗಮ ವಿಜೃಂಭಣೆಯಿಂದ ನೆರವೇರಿತು.
Vijaya Karnataka Web SMR-5ganesh3


ನಗರದ ಎಲ್ಲ ಶಕ್ತಿ ದೇವತೆಗಳು ಬೆಳಗ್ಗೆಯೇ ದೇವಾಲಯಕ್ಕೆ ಮೆರವಣಿಗೆ ಮೂಲಕ ಆಗಮಿಸಿದ್ದು, ದೇವಾಲಯ ಹಿಂಭಾಗದ ಸಭಾಂಗಣದಲ್ಲಿ ಸಮಾಗಮಗೊಂಡಿದ್ದವು. ಮಧ್ಯಾಹ್ನ ಮಹಾಮಂಗಳಾರತಿ ನಂತರ ಸಾವಿರಾರು ಭಕ್ತರು ಮಹಾ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನದಿಂದ ರಾತ್ರಿ ವರೆಗೂ ದೇವತೆಗಳಿಗೆ ಮಹಿಳೆಯರು ಮಡಲಕ್ಕಿ ಸಮರ್ಪಿಸಿದರು. ರಾತ್ರಿ ಉತ್ಸವ ಮೂರ್ತಿಗಳು ಪೂಜೆ ಸ್ವೀಕರಿಸಿ ಸ್ವಸ್ಥಾನಕ್ಕೆ ಮರಳಿದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ