ಆ್ಯಪ್ನಗರ

ಬೀಗ ಒಡೆದು ಮನೆ ಆಭರಣ, ನಗದು ಕಳವು

ಮನೆಯೊಂದರ ಬೀಗ ಒಡೆದು 30 ಗ್ರಾಂ ಬಂಗಾರ ಹಾಗೂ 50 ಸಾವಿರ ನಗದು ದೋಚಿದ ಘಟನೆ ಪಟ್ಟಣದಲ್ಲಿ ನಡೆದಿದೆ.

Vijaya Karnataka 5 Jan 2019, 5:00 am
ಸೊರಬ: ಮನೆಯೊಂದರ ಬೀಗ ಒಡೆದು 30 ಗ್ರಾಂ ಬಂಗಾರ ಹಾಗೂ 50 ಸಾವಿರ ನಗದು ದೋಚಿದ ಘಟನೆ ಪಟ್ಟಣದಲ್ಲಿ ನಡೆದಿದೆ.
Vijaya Karnataka Web SMR-4SRBP2

ಪಟ್ಟಣದ ಹಳೇಸೊರಬ ಜಯಂತಿ ಗ್ರಾಮದ ಬಂಗಾರಪ್ಪ ಬಡಾವಣೆಯಲ್ಲಿ ಗುರುವಾರ ರಾತ್ರಿ ಪುರದ ಗಜೇಂದ್ರಪ್ಪ ಅವರ ಮನೆ ಬಾಗಿಲು ಬೀಗ ಒಡೆದು ಕಳ್ಳರು ಅಲಮೇರದಲ್ಲಿ ಇದ್ದ 30 ಗ್ರಾಂ ಬಂಗಾರದ ಒಡವೆ ಹಾಗೂ 50 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಈ ಸಂಬಂಧ ಗಜೇಂದ್ರಪ್ಪ ಪೊಲೀಸರಿಗೆ ದೂರು ನೀಡಿದ್ದು. ಸ್ಥಳಕ್ಕೆ ಶಿವಮೊಗ್ಗದಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಸೊರಬ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗಜೇಂದ್ರಪ್ಪ ಮತ್ತು ಕುಟುಂಬದವರು ಗುರುವಾರ ಬೆಳಗ್ಗೆ ಕಾರ್ಯಕ್ರಮ ನಿಮಿತ್ತ ಸಾಗರಕ್ಕೆ ತೆರಳಿದ್ದು, ಶುಕ್ರವಾರ ಬೆಳಿಗ್ಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ