ಆ್ಯಪ್ನಗರ

ಸಾಗರದಲ್ಲಿನಾಳೆ ‘ಗಾಂಧಿ-150’

ಇಲ್ಲಿನ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮತ್ತು ರಾಜೀವ್‌ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯಿಂದ ಅ. 2ರಂದು ಗಾಂಧಿ ಜಯಂತಿ ಅಂಗವಾಗಿ 'ಗಾಂಧಿ-150' ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌ ತಿಳಿಸಿದರು.

Vijaya Karnataka 1 Oct 2019, 5:00 am
ಸಾಗರ: ಇಲ್ಲಿನ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮತ್ತು ರಾಜೀವ್‌ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯಿಂದ ಅ. 2ರಂದು ಗಾಂಧಿ ಜಯಂತಿ ಅಂಗವಾಗಿ 'ಗಾಂಧಿ-150' ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌ ತಿಳಿಸಿದರು.
Vijaya Karnataka Web tommorow gandhi at 150 at sagar
ಸಾಗರದಲ್ಲಿನಾಳೆ ‘ಗಾಂಧಿ-150’


ಸುದ್ದಿಗೋಷ್ಠಿಯಲ್ಲಿಸೋಮವಾರ ಮಾತನಾಡಿದ ಅವರು, ಅ. 2ರಂದು ಬೆಳಗ್ಗೆ 10.30ಕ್ಕೆ ಗಾಂಧಿಮಂದಿರದಲ್ಲಿ'ನಮ್ಮೆದೆಯ ಧ್ವನಿ ಗಾಂಧಿ ಮತ್ತು ನಮ್ಮೆದೆಯ ನಿಷ್ಠೆ ಸಂವಿಧಾನ' ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ವಕೀಲ ಕೊಪ್ಪದ ಸುಧೀರ್‌ಕುಮಾರ್‌ ಮುರಳ್ಳಿ ಉಪನ್ಯಾಸ ನೀಡಲಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಉಪಸ್ಥಿತರಿದ್ದು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಾಗಾರದಲ್ಲಿಚುನಾಯಿತ ಪ್ರತಿನಿಧಿಗಳು, ಕಾಂಗ್ರೆಸ್‌ ಪ್ರಮುಖರು ಪಾಲ್ಗೊಳ್ಳಲಿದ್ದು, ಚರ್ಚೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಗಾಂಧೀಜಿಯವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿಅ.10ರಂದು ಬೆಳಗ್ಗೆ 10ಕ್ಕೆ ಗಾಂಧಿ ಮಂದಿರದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿಪಾದಯಾತ್ರೆ ಮೂಲಕ ಗಾಂಧೀಜಿಯವರ ತತ್ವಾದರ್ಶ, ಹೋರಾಟದ ಹಾದಿ ಇನ್ನಿತರೆ ಕುರಿತು ಜನರಿಗೆ ಅರಿವು ಮೂಡಿಸಲಾಗುತ್ತದೆ ಎಂದರು.

ನಗರ ಬ್ಲಾಕ್‌ ಅಧ್ಯಕ್ಷ ತಸ್ರೀಫ್‌, ರಾಜೀವ್‌ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆ ತಾಲೂಕು ಅಧ್ಯಕ್ಷ ಕನ್ನಪ್ಪ ಮುಳಕೇರಿ, ಸರಸ್ವತಿ ನಾಗರಾಜ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ