ಆ್ಯಪ್ನಗರ

ನಾಳೆ ನಗರದಲ್ಲಿ ನಮೋತ್ಸವ

ವಿಶ್ವಗುರು ಭಾರತದ ಕನಸು ಹೊತ್ತ ಯುವಕರಿಂದ ಮಾ.2ರಂದು ನಗರದ ಅಂಬೇಡ್ಕರ್‌ ಭವನದಲ್ಲಿ ನಮೋತ್ಸವ-2019 ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಧ್ರುವಕುಮಾರ್‌ ಹೇಳಿದರು.

Vijaya Karnataka 1 Mar 2019, 5:00 am
ಶಿವಮೊಗ್ಗ : ವಿಶ್ವಗುರು ಭಾರತದ ಕನಸು ಹೊತ್ತ ಯುವಕರಿಂದ ಮಾ.2ರಂದು ನಗರದ ಅಂಬೇಡ್ಕರ್‌ ಭವನದಲ್ಲಿ ನಮೋತ್ಸವ-2019 ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಧ್ರುವಕುಮಾರ್‌ ಹೇಳಿದರು.
Vijaya Karnataka Web tomorrow navothsava in city
ನಾಳೆ ನಗರದಲ್ಲಿ ನಮೋತ್ಸವ


ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಐದು ವರ್ಷಗಳಲ್ಲಿ ರಾಷ್ಟ್ರಕ್ಕೆ ನೀಡಿದಂತಹ ಕೊಡುಗೆಗಳು ಏನು ಮತ್ತು ಜನಸಾಮಾನ್ಯರಿಗಾಗಿ ನೀಡಿದಂತಹ ಯೋಜನೆಗಳೇನು ಎಂಬುದನ್ನು ತಿಳಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸಮಾರಂಭದ ಉದ್ಘಾಟನೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಲಿದ್ದು, ಶಾಸಕರಾದ ಕೆ.ಎಸ್‌.ಈಶ್ವರಪ್ಪ, ಆಯನೂರು ಮಂಜುನಾಥ್‌, ಎಸ್‌.ರುದ್ರೇಗೌಡ, ಕೆ.ಬಿ.ಅಶೋಕ್‌ನಾಯ್ಕ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ.ಎಸ್‌.ಅರುಣ್‌ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮ ಅಂಗವಾಗಿ ಅಂದು ಮಧ್ಯಾಹ್ನ 2ಕ್ಕೆ ದೇಶಭಕ್ತಿ ಗೀತೆಗಳ ಆಧಾರಿತ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. 15ರಿಂದ 30 ವರ್ಷ ವಯೋಮಾನದ ನೃತ್ಯ ತಂಡ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಒಂದು ತಂಡದಲ್ಲಿ 8ರಿಂದ 15 ಸ್ಪರ್ಧಿಗಳು ಭಾಗವಹಿಸಬಹುದಾಗಿದ್ದು, 5ರಿಂದ 6 ನಿಮಿಷದ ಕಾಲಾವಕಾಶ ನೀಡಲಾಗುವುದು. ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 6 ಸಾವಿರ ರೂ., ದ್ವಿತೀಯ ಬಹುಮಾನ 3 ಸಾವಿರ ರೂ.ಗಳನ್ನು ನೀಡಲಾವುದು. ಅದೇ ರೀತಿ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 3 ಸಾವಿರ ರೂ., ದ್ವಿತೀಯ ಬಹುಮಾನ 2 ಸಾವಿರ ರೂ. ನೀಡಲಾಗುತ್ತದೆ ಎಂದರು.

ಗೋಷ್ಠಿಯಲ್ಲಿ ಸಮೃದ್ಧಿ ಕಲಾ ತಂಡದ ಅಧ್ಯಕ್ಷ ಅನಿಲ್‌ಕುಮಾರ್‌, ಎಸ್‌.ಅಭಿಷೇಕ್‌, ಕಾರ್ಯದರ್ಶಿ ಪೃಥ್ವಿ ಪಿ.ಗೌಡ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ