ಆ್ಯಪ್ನಗರ

ಹುಲಿಕಲ್‌ ಘಾಟಿಯಲ್ಲಿ ಮರ ಬಿದ್ದು ವಾಹನ ಜಖಂ

ತಾಲೂಕಿನ ಹುಲಿಕಲ್‌ ಘಾಟಿಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ವಾಹನ ಜಖಂಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.

Vijaya Karnataka 16 Jun 2019, 5:00 am
ಹೊಸನಗರ: ತಾಲೂಕಿನ ಹುಲಿಕಲ್‌ ಘಾಟಿಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ವಾಹನ ಜಖಂಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.
Vijaya Karnataka Web SMR-15HOSP5


ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜ್‌ ಅವರು ಮಾಸ್ತಿಕಟ್ಟೆಯಿಂದ ಸಿದ್ದಾಪುರಕ್ಕೆ ಇಲಾಖಾ ಸಿಬ್ಬಂದಿಗಳೊಂದಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಪೊನ್ನುರಾಜ್‌ ಅವರಿದ್ದ ವಾಹನ ದಾಟಿದ ಬಳಿಕ ಸಿಬ್ಬಂದಿ ವಾಹನ ಸಾಗುವಾಗ ರಸ್ತೆ ಪಕ್ಕದಲ್ಲಿದ್ದ ಮರ ಧರಾಶಾಯಿಯಾಯಿತು. ಆದರೆ, ಚಾಲಕನ ಸಮಯಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರದ ಕೊಂಬೆಗಳು ಅಪ್ಪಳಿಸಿದ ರಭಸಕ್ಕೆ ವಾಹನಕ್ಕೆ ಹಾನಿಯಾಗಿದೆ. ಘಟನೆಯಿಂದ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು. ಸ್ಥಳೀಯರ ಸಹಕಾರದೊಂದಿಗೆ ಮರವನ್ನು ವಿವಿಧ ಇಲಾಖೆ ಸಿಬ್ಬಂದಿ ತೆರವುಗೊಳಿಸಿದ ನಂತರ ಸಂಚಾರ ಸುಗಮಗೊಂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ