ಆ್ಯಪ್ನಗರ

ಮೈತ್ರಿಕೂಟಕ್ಕೆ ಉಪ್ಪಾರ ಸಮಾಜ ಬೆಂಬಲ

ಉಪ್ಪಾರ ಸಮಾಜಕ್ಕೆ ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ನಾವು ಮುಂದೆಯೂ ಬದ್ಧರಾಗಿರುತ್ತೇವೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದರು.

Vijaya Karnataka 13 Apr 2019, 5:00 am
ಶಿವಮೊಗ್ಗ : ಉಪ್ಪಾರ ಸಮಾಜಕ್ಕೆ ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ನಾವು ಮುಂದೆಯೂ ಬದ್ಧರಾಗಿರುತ್ತೇವೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದರು.
Vijaya Karnataka Web uppara social support for the alliance
ಮೈತ್ರಿಕೂಟಕ್ಕೆ ಉಪ್ಪಾರ ಸಮಾಜ ಬೆಂಬಲ


ನಗರದ ಲಗನ ಮಂದಿರದಲ್ಲಿ ಗುರುವಾರ ಉಪ್ಪಾರ ಸಮಾಜದ ಸ್ನೇಹಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 30ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಉಪ್ಪಾರ ಜನಾಂಗವು ಮೂಲತಃ ಉಪ್ಪು ತಯಾರಿಸುವ ಹಾಗೂ ಸೊಪ್ಪು ಬೆಳೆಯುವ ಜನಾಂಗವಾಗಿದ್ದು, ಬದುಕಿನಲ್ಲಿ ಸ್ವಾಭಿಮಾನಿಗಳಾಗಿದ್ದಾರೆ. ಉಪ್ಪಾರ ಸಮಾಜದ ಶ್ರೇಯೋಭಿವೃದ್ಧಿಗಾಗಿ ಮಾಜಿ ಸಿಎಂಗಳಾದ ಎಸ್‌.ಬಂಗಾರಪ್ಪ, ಸಿದ್ದರಾಮಯ್ಯ ಅವರು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರು. ನಾವೆಲ್ಲರೂ ಈ ಸಮಾಜವನ್ನು ನಮಗೆ ಗೊತ್ತಿರುವಷ್ಟು ಮಟ್ಟಿಗೆ ಗುರುತಿಸಿದ್ದೇವೆ. ಇನ್ನು ಮುಂದೆಯೂ ಹೆಚ್ಚಿನ ಸವಲತ್ತುಗಳನ್ನು ಒದಗಿಸಿಕೊಡುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಲೋಕಸಭೆಯ ಮೈತ್ರಿಕೂಟದ ಅಭ್ಯರ್ಥಿ ಮಧುಬಂಗಾರಪ್ಪ ಮಾತನಾಡಿ, ಉಪ್ಪಾರ ಸಮಾಜದ ಬಗ್ಗೆ ನಮ್ಮ ತಂದೆಯವರ ಕಾಲದಿಂದಲೂ ಅಪಾರವಾದ ಅಭಿಮಾನ ಹೊಂದಿದ್ದೇವೆ. ನಮ್ಮ ತಂದೆಯವರ ಮೇಲಿನ ಅಭಿಮಾನವನ್ನು ಸಮಾಜದವರು ಈಗಲೂ ತೋರಿಸುತ್ತಿರುವುದು ಹೆಮ್ಮೆ ಎನಿಸಿದೆ. ನಮ್ಮ ತಂದೆಯವರು ಅತ್ತಿಗುಂದ ಚಂದ್ರಶೇಖರ್‌ ಅವರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರನ್ನಾಗಿ ಮಾಡಿದ್ದರು. ನಾವು ಯಾವಾಗಲೂ ನಿಮ್ಮ ಸಮಾಜಕ್ಕೆ ಋುಣಿಯಾಗಿರುತ್ತೇವೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸಮಾಜದ ಮುಖಂಡ ಕೆ.ದೇವೇಂದ್ರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಸಮಾಜಕ್ಕೆ 2ಬಾರಿ ಶಾಸಕ ಸ್ಥಾನ, ಈ ಬಾರಿ ಮೈತ್ರಿ ಸರಕಾರದಲ್ಲಿ ಪುಟ್ಟರಂಗಶೆಟ್ಟಿ ಅವರನ್ನು ಸಂಪುಟದರ್ಜೆ ಸಚಿವರನ್ನಾಗಿ ಮಾಡಿದ್ದಾರೆ. ಭಗೀರಥ ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿಸಿದ್ದಾರೆ. ಸಮಾಜದವರನ್ನು ಅಭಿವೃದ್ಧಿಪಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮ ಹಾಗೂ ಬೆಂಗಳೂರಲ್ಲಿ ಶೈಕ್ಷ ಣಿಕ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ 21.2 ಎಕರೆ ಜಮೀನು ನೀಡಿದೆ. ಈ ಕಾರಣದಿಂದ ನಮ್ಮ ಸಮಾಜವು ಈ ಬಾರಿ ಮೈತ್ರಿಕೂಟವನ್ನು ಬೆಂಬಲಿಸುತ್ತದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್‌, ಶಾರದಾ ಪೂರ್ಯಾನಾಯ್ಕ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಉಮೇಶ್‌, ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‌ ಮತ್ತಿತರರು ಹಾಜರಿದ್ದರು. ಮಾಜಿ ಮೇಯರ್‌ ನಾಗರಾಜ್‌ ಕಂಕಾರಿ ನಿರೂಪಿಸಿದರು. ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಎಸ್‌.ಟಿ.ಹಾಲಪ್ಪ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ