ಶಿವಮೊಗ್ಗ: ಬ್ರಿಟಿಷ್ ಕಾಲದ ಪ್ರಕೃತಿ ವಿಕೋಪ ಪರಿಹಾರ ಮಾರ್ಗಸೂಚಿ ಬದಲಾಯಿಸಬೇಕೆಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ಪ್ರಕೃತಿ ವಿಕೋಪದಿಂದ ಜನರನ್ನು ಕಾಪಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿವೆ. ಅಲ್ಲದೇ ಬ್ರಿಟಿಷ್ ಕಾಲದ ಪ್ರಕೃತಿ ವಿಕೋಪ ಪರಿಹಾರ ಮಾರ್ಗಸೂಚಿಯನ್ನು ಅನುಸರಿಸಲಾಗುತ್ತಿದೆ. ಇದು ಬದಲಾಗಬೇಕು. ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಮಾರ್ಗಸೂಚಿ ಬದಲಾಯಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಪ್ರವಾಹಕ್ಕೆ ಹಲವು ಗ್ರಾಮಗಳು ಮುಳುಗಡೆಯಾಗಿ ಜಾನುವಾರು ಕೊಚ್ಚಿಹೋಗಿವೆ. ಮಳೆ ಪ್ರಮಾಣವನ್ನು ನೂತನ ತಂತ್ರಜ್ಞಾನದ ಮೂಲಕ ಅರಿಯಲು ಸಾಧ್ಯವಿದ್ದರೂ ಅಧಿಕಾರಿಗಳು ಬೇಜವಾಬ್ದಾರಿಯಿಂದ ಅಣೆಕಟ್ಟೆಯಿಂದ ನೀರು ಹರಿಸಿದ್ದಾರೆ. ನೀರು ಹರಿಸುವ ಮೊದಲು ಜನರು, ಜಾನುವಾರುಗಳನ್ನು ಸ್ಥಳಾಂತರ ಮಾಡಬಹುದಿತ್ತು. ಪ್ರಾಣ ಹಾನಿ ತಡೆಯಬಹುದಿತ್ತು. ಆಸ್ತಿಪಾಸ್ತಿಗಳ ರಕ್ಷ ಣೆ ಮಾಡಬಹುದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳ ನಿರ್ಲಕ್ಷ ದಿಂದ ಜನ ದುರಂತ ಅನುಭವಿಸುವಂತಾಗಿದೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೊಯ್ನಾ, ಆಲಮಟ್ಟಿ, ಘಟಪ್ರಭಾ, ಹಿರಣ್ಯಕೇಶಿ, ದೂದ… ಸಾಗರ್, ನಾರಾಯಣಪುರ ಡ್ಯಾಮ… ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿ ನೀರನ್ನು ಒಮ್ಮೆಲೇ ಹೊರಬಿಟ್ಟ ಕಾರಣ ಹಳ್ಳಿಗಳು ಜಲಾವೃತಗೊಂಡವು. ಕಷ್ಟಪಟ್ಟು ಬೆಳೆದ ಬೆಳೆ ನಾಶವಾಗಿದೆ. ರೈತರು ಗಂಜಿ ಕೇಂದ್ರಗಳಲ್ಲಿ ಬೇಡಿ ತಿನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಹಿಂದಿನ ಸಿಎಂ ಕುಮಾರಸ್ವಾಮಿ ಸರಕಾರದಲ್ಲಿ ಮನೆ ಕಳೆದುಕೊಂಡವರಿಗೆ 10 ಲಕ್ಷ ರೂ. ಮನೆ ಕಟ್ಟಿಕೊಳ್ಳಲು ನೀಡಲಾಗಿತ್ತು. ಈಗ ಸಿಎಂ ಯಡಿಯೂರಪ್ಪ ಅವರು 5 ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ. ಮನೆ ದುರಸ್ತಿಗೆ ಕೇವಲ 1 ಲಕ್ಷ ರೂ. ನೀಡುತ್ತೇವೆ ಎನ್ನುತ್ತಿರುವುದು ಯಾವ ರೀತಿಯ ಲೆಕ್ಕಾಚಾರದ ಪ್ರಕಾರ ಎಂದು ತಿಳಿಯುತ್ತಿಲ್ಲಎಂದು ಖಾರವಾಗಿ ಹೇಳಿದರು.
ಸರಕಾರ ಒಂದು ಕುಟುಂಬಕ್ಕೆ 10 ಸಾವಿರ ರೂ ನೀಡುವುದಾಗಿ ಹೇಳುತ್ತಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ. ಪ್ರವಾಹದಿಂದ ನಷ್ಟವಾಗಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ನಷ್ಟಕ್ಕೆ ಸರಿಸಮಾನವಾಗಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ರೈತರ ಸಂಘದಿಂದ ಪ್ರತಿಭಟನೆ:
ಬ್ರಿಟಿಷ್ ಕಾಲದ ಪ್ರಕೃತಿ ವಿಕೋಪ ಪರಿಹಾರ ಮಾರ್ಗಸೂಚಿಯನ್ನು ಬದಲಾಯಿಸುವಂತೆ ಹಾಗೂ ಪ್ರಕೃತಿ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಒತ್ತಾಯಿಸಿ ಆ. 26ರಂದು ಡಿಸಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಗೋಷ್ಠಿಯಲ್ಲಿ ರೈತ ಸಂಘದ ಮುಖಂಡರಾದ ಶಿವಮೂರ್ತಿ, ಕೆ. ರಾಘವೇಂದ್ರ, ಹಿಟ್ಟೂರು ರಾಜು, ಟಿಎಂ ಚಂದ್ರಪ್ಪ, ಮಂಜಪ್ಪ, ಜಗದೀಶ್ ರಾಮಚಂದ್ರ, ಗುರುಶಾಂತ, ನಾಗರಾಜ್ ಮತ್ತಿತರರು ಇದ್ದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ಪ್ರಕೃತಿ ವಿಕೋಪದಿಂದ ಜನರನ್ನು ಕಾಪಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿವೆ. ಅಲ್ಲದೇ ಬ್ರಿಟಿಷ್ ಕಾಲದ ಪ್ರಕೃತಿ ವಿಕೋಪ ಪರಿಹಾರ ಮಾರ್ಗಸೂಚಿಯನ್ನು ಅನುಸರಿಸಲಾಗುತ್ತಿದೆ. ಇದು ಬದಲಾಗಬೇಕು. ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಮಾರ್ಗಸೂಚಿ ಬದಲಾಯಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಪ್ರವಾಹಕ್ಕೆ ಹಲವು ಗ್ರಾಮಗಳು ಮುಳುಗಡೆಯಾಗಿ ಜಾನುವಾರು ಕೊಚ್ಚಿಹೋಗಿವೆ. ಮಳೆ ಪ್ರಮಾಣವನ್ನು ನೂತನ ತಂತ್ರಜ್ಞಾನದ ಮೂಲಕ ಅರಿಯಲು ಸಾಧ್ಯವಿದ್ದರೂ ಅಧಿಕಾರಿಗಳು ಬೇಜವಾಬ್ದಾರಿಯಿಂದ ಅಣೆಕಟ್ಟೆಯಿಂದ ನೀರು ಹರಿಸಿದ್ದಾರೆ. ನೀರು ಹರಿಸುವ ಮೊದಲು ಜನರು, ಜಾನುವಾರುಗಳನ್ನು ಸ್ಥಳಾಂತರ ಮಾಡಬಹುದಿತ್ತು. ಪ್ರಾಣ ಹಾನಿ ತಡೆಯಬಹುದಿತ್ತು. ಆಸ್ತಿಪಾಸ್ತಿಗಳ ರಕ್ಷ ಣೆ ಮಾಡಬಹುದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳ ನಿರ್ಲಕ್ಷ ದಿಂದ ಜನ ದುರಂತ ಅನುಭವಿಸುವಂತಾಗಿದೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೊಯ್ನಾ, ಆಲಮಟ್ಟಿ, ಘಟಪ್ರಭಾ, ಹಿರಣ್ಯಕೇಶಿ, ದೂದ… ಸಾಗರ್, ನಾರಾಯಣಪುರ ಡ್ಯಾಮ… ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿ ನೀರನ್ನು ಒಮ್ಮೆಲೇ ಹೊರಬಿಟ್ಟ ಕಾರಣ ಹಳ್ಳಿಗಳು ಜಲಾವೃತಗೊಂಡವು. ಕಷ್ಟಪಟ್ಟು ಬೆಳೆದ ಬೆಳೆ ನಾಶವಾಗಿದೆ. ರೈತರು ಗಂಜಿ ಕೇಂದ್ರಗಳಲ್ಲಿ ಬೇಡಿ ತಿನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಹಿಂದಿನ ಸಿಎಂ ಕುಮಾರಸ್ವಾಮಿ ಸರಕಾರದಲ್ಲಿ ಮನೆ ಕಳೆದುಕೊಂಡವರಿಗೆ 10 ಲಕ್ಷ ರೂ. ಮನೆ ಕಟ್ಟಿಕೊಳ್ಳಲು ನೀಡಲಾಗಿತ್ತು. ಈಗ ಸಿಎಂ ಯಡಿಯೂರಪ್ಪ ಅವರು 5 ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ. ಮನೆ ದುರಸ್ತಿಗೆ ಕೇವಲ 1 ಲಕ್ಷ ರೂ. ನೀಡುತ್ತೇವೆ ಎನ್ನುತ್ತಿರುವುದು ಯಾವ ರೀತಿಯ ಲೆಕ್ಕಾಚಾರದ ಪ್ರಕಾರ ಎಂದು ತಿಳಿಯುತ್ತಿಲ್ಲಎಂದು ಖಾರವಾಗಿ ಹೇಳಿದರು.
ಸರಕಾರ ಒಂದು ಕುಟುಂಬಕ್ಕೆ 10 ಸಾವಿರ ರೂ ನೀಡುವುದಾಗಿ ಹೇಳುತ್ತಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ. ಪ್ರವಾಹದಿಂದ ನಷ್ಟವಾಗಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ನಷ್ಟಕ್ಕೆ ಸರಿಸಮಾನವಾಗಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ರೈತರ ಸಂಘದಿಂದ ಪ್ರತಿಭಟನೆ:
ಬ್ರಿಟಿಷ್ ಕಾಲದ ಪ್ರಕೃತಿ ವಿಕೋಪ ಪರಿಹಾರ ಮಾರ್ಗಸೂಚಿಯನ್ನು ಬದಲಾಯಿಸುವಂತೆ ಹಾಗೂ ಪ್ರಕೃತಿ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಒತ್ತಾಯಿಸಿ ಆ. 26ರಂದು ಡಿಸಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಗೋಷ್ಠಿಯಲ್ಲಿ ರೈತ ಸಂಘದ ಮುಖಂಡರಾದ ಶಿವಮೂರ್ತಿ, ಕೆ. ರಾಘವೇಂದ್ರ, ಹಿಟ್ಟೂರು ರಾಜು, ಟಿಎಂ ಚಂದ್ರಪ್ಪ, ಮಂಜಪ್ಪ, ಜಗದೀಶ್ ರಾಮಚಂದ್ರ, ಗುರುಶಾಂತ, ನಾಗರಾಜ್ ಮತ್ತಿತರರು ಇದ್ದರು.