ಆ್ಯಪ್ನಗರ

ಶಿಮುಲ್‌, ಡಿಸಿಸಿ ಬ್ಯಾಂಕ್‌ ಚುನಾವಣೆ ಮುಂದೂಡಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರ ಒಕ್ಕೂಟ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆ ಅವಧಿಯನ್ನು ಮುಂದೂಡುವಂತೆ ಬಿಜೆಪಿ ರೈತಮೋರ್ಚಾದ ರಾಜ್ಯ ಕಾರ್ಯದರ್ಶಿ ಎಸ್‌.ದತ್ತಾತ್ರಿ ಒತ್ತಾಯಿಸಿದರು.

Vijaya Karnataka 12 Mar 2019, 5:00 am
ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರ ಒಕ್ಕೂಟ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆ ಅವಧಿಯನ್ನು ಮುಂದೂಡುವಂತೆ ಬಿಜೆಪಿ ರೈತಮೋರ್ಚಾದ ರಾಜ್ಯ ಕಾರ್ಯದರ್ಶಿ ಎಸ್‌.ದತ್ತಾತ್ರಿ ಒತ್ತಾಯಿಸಿದರು.
Vijaya Karnataka Web dattatri [bjp]


ಸುದ್ದಿಗೋಷ್ಠಿಯಲ್ಲಿ ಸೋಮವಾರ ಅವರು ಮಾತನಾಡಿ, ಲೋಕಸಭಾ ಚುನಾವಣೆ(ಏ.23) ದಿನಾಂಕ ಅವಧಿಯಲ್ಲಿಯೇ ಶಿಮುಲ್‌ ಚುನಾವಣೆ(ಏ.21ಕ್ಕೆ ) ಡಿಸಿಸಿ ಬ್ಯಾಂಕ್‌ ಚುನಾವಣೆ( ಏ.28ಕ್ಕೆ) ನಡೆಯುವುದರಿಂದ ಗೊಂದಲಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ ಎಂದರು.

ಶಿಮುಲ್‌ ಮತ್ತು ಡಿಸಿಸಿ ಬ್ಯಾಂಕ್‌ ಚುನಾವಣೆಗಳು ಪಕ್ಷಾತೀತವಾಗಿವೆ. ಎಲ್ಲ ಪಕ್ಷದವರೂ ಇಲ್ಲಿ ಇರುತ್ತಾರೆ. ರೈತರೇ ಇಲ್ಲಿ ಹೆಚ್ಚಾಗಿದ್ದಾರೆ. ಈಗಾಗಲೇ ವೇಳಾಪಟ್ಟಿ ಕೂಡ ನಿಗದಿಯಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಇರುವ ಕಾರ್ಯಕರ್ತರೂ ಇಲ್ಲಿಯೂ ಇರುತ್ತಾರೆ. ಮೂರೂ ಚುನಾವಣೆಗಳಲ್ಲಿ ಪಾಲ್ಗೊಳ್ಳುವುದು ಅತ್ಯಂತ ಕಷ್ಟವಾಗುತ್ತದೆ. ಅಲ್ಲದೆ ಜಿಲ್ಲಾಧಿಕಾರಿಗಳೇ ಈ ಮೂರು ಚುನಾವಣೆಗಳಿಗೂ ಚುನಾವಣಾಧಿಕಾರಿಗಳಾಗಿರುತ್ತಾರೆ. ಲೋಕಸಭಾ ಚುನಾವಣೆ ನಂತರ ಶಿಮುಲ್‌ ಮತ್ತು ಡಿಸಿಸಿ ಬ್ಯಾಂಕ್‌ ಚುನಾವಣೆ ನಡೆಸುವಂತೆ ಮನವಿ ಮಾಡಿದರು.

ಬ್ಯಾಂಕ್‌ ವಹಿವಾಟು ಮೇಲೆ ನಿಗಾ ಇಡಿ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು ಮತ್ತು ಜಿಲ್ಲಾ ಜೆಡಿಎಸ್‌ ಅಧ್ಯಕ್ಷರೂ ಒಬ್ಬರೇ ಆಗಿರುವುದರಿಂದ ಡಿಸಿಸಿ ಬ್ಯಾಂಕ್‌ನಿಂದ ಸ್ವಸಹಾಯ ಗುಂಪುಗಳಿಗೆ ಇನ್ನಿತರೆ ವಿಭಾಗಕ್ಕೆ ಯಾವುದೇ ರೀತಿಯ ಸಾಲವನ್ನು ನೀಡದಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ಮಾಡಬೇಕು ಮತ್ತು ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಡಿಸಿಸಿ ಬ್ಯಾಂಕಿನ ಎಲ್ಲ ವಹಿವಾಟುಗಳನ್ನೂ ಗಮನಿಸಬೇಕೆಂದು ಎಸ್‌.ದತ್ತಾತ್ರಿ ಆಗ್ರಹಿಸಿದರು.

ಗೋಷ್ಠಿಯಲ್ಲಿ ಪ್ರಮುಖರಾದ ಡಿ.ಎಸ್‌.ಅರುಣ್‌, ಎಸ್‌.ಎಸ್‌.ಜ್ಯೋತಿ ಪ್ರಕಾಶ್‌, ಎಚ್‌.ಎಂ. ಸತ್ಯನಾರಾಯಣ, ಗಾಜನೂರು ಗಣೇಶ್‌, ಕಮಲಾಕ್ಷಪ್ಪ, ಟಿ.ಶಿವಪ್ಪ, ಬಿ.ಕೆ. ಶ್ರೀನಾಥ್‌ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ