ಆ್ಯಪ್ನಗರ

ಕಂಠೀರವ ಕ್ರೀಡಾಂಗಣ ಅಥ್ಲೆಟಿಕ್‌ಗೆ ಬಳಕೆ ಮಾಡಿ

ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಅಥ್ಲೆಟಿಕ್‌ಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Vijaya Karnataka 8 Sep 2019, 5:00 am
ಶಿವಮೊಗ್ಗ: ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಅಥ್ಲೆಟಿಕ್‌ಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
Vijaya Karnataka Web 27166GANESH3_46


ಅಥ್ಲೆಟಿಕ್‌ ಕ್ರೀಡೆಗಾಗಿಯೇ ನಿರ್ಮಿಸಿರುವ ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಪುಟ್‌ಬಾಲ್‌ನಂತ ಇತರೆ ಕ್ರೀಡೆಗಳಿಗೆ ನೀಡುವ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಧೋರಣೆ ಸರಿಯಿಲ್ಲ ಎಂದು ದೂರಿದರು.

ಕಂಠೀರವ ಕ್ರೀಡಾಂಗಣದಲ್ಲಿಅಥ್ಲೆಟಿಕ್‌ ಕ್ರೀಡೆಗಳಿಗಾಗಿ ಬಳಸುವ ಸಿಂಥೆಟಿಕ್‌ ಟ್ರ್ಯಾಕ್‌ ಈಗಾಗಲೇ ಹಾಳಾಗಿದ್ದು, ಇದರ ನಿರ್ವಹಣೆ ಕೊರತೆಯಿಂದಾಗಿ ಕ್ರೀಡಾಪಟುಗಳು ಆಸಕ್ತಿ ಕುಗ್ಗುತ್ತಿದೆ. ಈ ಬಗ್ಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಅಥ್ಲೇಟಿಕ್‌ ಕ್ರೀಡಾಂಗಣದ ಸರಿಯಾದ ನಿರ್ವಹಣೆ ಮಾಡುವಲ್ಲಿಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಂಪೂರ್ಣವಾಗಿವೆ. ಹೀಗಾಗಿ ರಾಜ್ಯದ ಎಲ್ಲಜಿಲ್ಲೆಗಳಲ್ಲೂಕ್ರೀಡಾ ಇಲಾಖೆಯಿಂದ ನಡೆದಿರುವ ಹಗರಣಗಳನ್ನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿಜಯ ಕರ್ನಾಟಕ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶ್‌ ಶೆಟ್ಟಿ, ಕಾರ್ಯಾಧ್ಯಕ್ಷ ರಘುವೀರ್‌ ಸಿಂಗ್‌, ಜಂಟಿ ಕಾರ್ಯದರ್ಶಿ ಮಂಜುನಾಥ್‌ಶೆಟಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ