ಆ್ಯಪ್ನಗರ

ಸಂಶೋಧನೆಗೆ ತಂತ್ರಜ್ಞಾನ ಬಳಸಿಕೊಳ್ಳಿ

ಕುವೆಂಪು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದಿಂದ ಶುಕ್ರವಾರ ಸಿಂಡಿಕೇಟ್‌ ಸಭಾಂಗಣದಲ್ಲಿಎಸ್‌ಸಿಪಿ, ಟಿಎಸ್‌ಪಿ ಅನುದಾನದಡಿ ಲ್ಯಾಪ್‌ಟಾಪ್‌ ವಿತರಣಾ ಕಾರ್ಯಕ್ರಮ ನಡೆಯಿತು.

Vijaya Karnataka 12 Oct 2019, 5:00 am
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದಿಂದ ಶುಕ್ರವಾರ ಸಿಂಡಿಕೇಟ್‌ ಸಭಾಂಗಣದಲ್ಲಿಎಸ್‌ಸಿಪಿ, ಟಿಎಸ್‌ಪಿ ಅನುದಾನದಡಿ ಲ್ಯಾಪ್‌ಟಾಪ್‌ ವಿತರಣಾ ಕಾರ್ಯಕ್ರಮ ನಡೆಯಿತು.
Vijaya Karnataka Web 11GANESH3_46


ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ಮಾತನಾಡಿದ ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ವಿಶ್ವವಿದ್ಯಾಲಯವು ನೀಡುತ್ತಿರುವ ಲ್ಯಾಪ್‌ಟಾಪ್‌ಗಳನ್ನು ಬಳಸಿಕೊಂಡು ಎಲ್ಲವಿದ್ಯಾರ್ಥಿಗಳಂತೆ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ಸಹ ಸಂಶೋಧನೆಯಲ್ಲಿಮುಂದಿರಬೇಕು ಎಂದು ಸಲಹೆ ನೀಡಿದರು.

ವಿವಿಯಲ್ಲಿಉತ್ತಮ ಸಂಶೋಧನೆಗಾಗಿ ಉಚಿತ ವೈ-ಫೈ ವ್ಯವಸ್ಥೆ, ಅಂತಾರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳ ಡಿಜಿಟಲ್‌ ಬಳಕೆ, ಸಂಶೋಧನಾ ಲೇಖನಗಳ ಪ್ರಕಟಣಾ ಸಹಾಯಧನಗಳನ್ನು ನೀಡಲಾಗುತ್ತಿದೆ. ಪ್ರಸ್ತುತ ವಿತರಿಸುತ್ತಿರುವ ಲ್ಯಾಪ್‌ಟಾಪ್‌ಗಳನ್ನು ಬಳಸಿಕೊಂಡು ಮತ್ತಷ್ಟು ಗುಣಮಟ್ಟದ ಮತ್ತು ತ್ವರಿತ ಸಂಶೋಧನಾ ಚಟುವಟಿಕೆಗಳಲ್ಲಿವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದರು.

ವಿವಿ ಕುಲಸಚಿವ ಪ್ರೊ.ಎಸ್‌.ಎಸ್‌. ಪಾಟೀಲ್‌, ಪ್ರೊ. ವೆಂಕಟೇಶ್ವರುಲು, ಪ್ರೊ. ಹಿರೇಮಣಿನಾಯ್‌್ಕ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ