ಆ್ಯಪ್ನಗರ

ನಾಳೆ ವಾಲ್ಮೀಕಿ ಯುವ ಸಮಾವೇಶ

ರಾಜ್ಯ ವಾಲ್ಮೀಕಿ ಯುವ ಪಡೆ ವತಿಯಿಂದ ನ.26ರಂದು ನಗರದ ಎನ್‌ಡಿವಿ ಹಾಸ್ಟೆಲ್‌ ಅವರಣದಲ್ಲಿ ಬೆಳಗ್ಗೆ 11 ಗಂಟೆಗೆ ರಾಜ್ಯ ವಾಲ್ಮೀಕಿ ನಾಯಕರ ಯುವ ಸಮಾವೇಶ ನಡೆಯಲಿದೆ

Vijaya Karnataka 25 Nov 2017, 5:00 am

ಶಿವಮೊಗ್ಗ: ರಾಜ್ಯ ವಾಲ್ಮೀಕಿ ಯುವ ಪಡೆ ವತಿಯಿಂದ ನ.26ರಂದು ನಗರದ ಎನ್‌ಡಿವಿ ಹಾಸ್ಟೆಲ್‌ ಅವರಣದಲ್ಲಿ ಬೆಳಗ್ಗೆ 11 ಗಂಟೆಗೆ ರಾಜ್ಯ ವಾಲ್ಮೀಕಿ ನಾಯಕರ ಯುವ ಸಮಾವೇಶ ನಡೆಯಲಿದೆ.

ಯುವ ಪಡೆಯ ಜಿಲ್ಲಾಧ್ಯಕ್ಷ ಆರ್‌.ಹರೀಶ್‌ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಕಾರ‍್ಯಕ್ರಮ ಉದ್ಘಾಟಿಸಿ, ಸಾನ್ನಿಧ್ಯ ವಹಿಸುವರು. ಎಐಸಿಸಿ ಕಾರ‍್ಯದರ್ಶಿ ಸತೀಶ್‌ ಜಾರಕಿಹೊಳಿ, ಬಳ್ಳಾರಿ ಸಂಸದ ಬಿ.ಶ್ರೀರಾಮುಲು, ಹೊದಿಗೆರೆ ರಮೇಶ್‌, ದೇವದುರ್ಗ ಶಾಸಕ ಶಿವನಗೌಡ ನಾಯಕ, ವಿಧಾನ ಪರಿಷತ್‌ ಸದಸ್ಯ ಉಗ್ರಪ್ಪ, ಬಿಜೆಪಿ ಮುಖಂಡ ರಾಜುಗೌಡ, ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಪಾಲಯ್ಯ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಆರ್‌.ಲಕ್ಷ್ಮಣ್‌, ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಶಾಸಕ ಕೆ.ಬಿ.ಪ್ರಸನ್ನಕುಮಾರ್‌, ಗ್ರಾಮಾಂತರ ಶಾಸಕಿ ಶಾರದಾ ಪೂರಾರ‍ಯನಾಯ್ಕ, ಶಿಕಾರಿಪುರ ಶಾಸಕ ಬಿ.ವೈ.ರಾಘವೇಂದ್ರ ಹಾಜರಿರುವರು ಎಂದರು.

ವಾಲ್ಮೀಕಿ ಜನಾಂಗದ ಜನಸಂಖ್ಯೆಗನುಗುಣವಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ಕ್ಷೇತ್ರಗಳಲ್ಲಿ ಈಗಿರುವ ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಎಸ್‌ಟಿಗೆ ಸೇರದಿದ್ದರೂ ಅನೇಕ ಜಾತಿಗೆ ಜನರಿಗೆ ಕಾನೂನು ಬಾಹಿರವಾಗಿ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ಜಯರಾಮ್‌, ಗುಡ್ಡಪ್ಪ, ಪುನೀತ್‌, ಮಂಜಪ್ಪ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ