ಆ್ಯಪ್ನಗರ

ವಿಐಎಸ್‌ಎಲ್‌ನ್ನು ರಕ್ಷಣಾ ಇಲಾಖೆ ವಹಿಸಿಕೊಳ್ಳಲಿ

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ರಕ್ಷ ಣಾ ಇಲಾಖೆಗೆ ವಹಿಸುವಂತೆ ಭಾರತರತ್ನ ಸರ್‌ ಎಂ. ವಿಶ್ವೇಶ್ವರಯ್ಯ ಚಾರಿಟಬಲ್‌ ಟ್ರಸ್ಟ್‌ ಛೇರ್ಮನ್‌ ಹಾಗು ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್‌. ವೇಣುಗೋಪಾಲ್‌ ರಕ್ಷ ಣಾ ಸಚಿವರನ್ನು ಒತ್ತಾಯಿಸಿದ್ದಾರೆ.

Vijaya Karnataka 5 Mar 2019, 5:00 am
ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ರಕ್ಷ ಣಾ ಇಲಾಖೆಗೆ ವಹಿಸುವಂತೆ ಭಾರತರತ್ನ ಸರ್‌ ಎಂ. ವಿಶ್ವೇಶ್ವರಯ್ಯ ಚಾರಿಟಬಲ್‌ ಟ್ರಸ್ಟ್‌ ಛೇರ್ಮನ್‌ ಹಾಗು ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್‌. ವೇಣುಗೋಪಾಲ್‌ ರಕ್ಷ ಣಾ ಸಚಿವರನ್ನು ಒತ್ತಾಯಿಸಿದ್ದಾರೆ.
Vijaya Karnataka Web SMR-4BDVT6


ಅವರು ಭಾನುವಾರ ವಿಐಎಸ್‌ಎಲ್‌ ಕಂಟ್ರಾಕ್ಟ್ ವರ್ಕರ್ಸ್‌ ಯೂನಿಯನ್‌ ವತಿಯಿಂದ ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಖಾನೆ ಮುಂಭಾಗ ಹಮ್ಮಿಕೊಳ್ಳಲಾಗಿರುವ ಅನಿರ್ಧಿಷ್ಟಾವಧಿ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರು ಮಾತನಾಡಿದರು.

ವಿಐಎಸ್‌ಎಲ್‌ ಕಾರ್ಖಾನೆ 101 ವರ್ಷಗಳನ್ನು ಪೂರೈಸಿದೆ. ಪ್ರಸ್ತುತ ಕಾರ್ಖಾನೆ ಸಂಕಷ್ಟದ ಸ್ಥಿತಿಯಲ್ಲಿದ್ದು, ಕಳೆದ 20 ವರ್ಷಗಳಿಂದ ಕಾಯಂ ಹಾಗೂ ಗುತ್ತಿಗೆ ಕಾರ್ಮಿಕರು ತೊಂದರೆ ಅನುಭವಿಸುವಂತಾಗಿದೆ. ಕಾರ್ಮಿಕರ ಸಂಖ್ಯೆ ಇಳಿಮುಖವಾಗಿದೆ. ಪ್ರಸ್ತುತ ಕಾರ್ಖಾನೆಯಲ್ಲಿ ಉಳಿದಿರುವ ಗುತ್ತಿಗೆ ಕಾರ್ಮಿಕರಿಗೆ ತಿಂಗಳಿಗೆ ಕೇವಲ 13 ದಿನ ಮಾತ್ರ ಉದ್ಯೋಗ ಲಭಿಸುತ್ತಿದೆ. ಕಾನೂನು ಬದ್ಧವಾಗಿ ಲಭಿಸಬೇಕಾದ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.

ಟ್ರಸ್ಟ್‌ ಪದಾಧಿಕಾರಿಗಳಾದ ಆರ್‌. ಮುಕುಂದಯ್ಯ, ಎಚ್‌.ಸಿ. ಗೋಪಾಲಕೃಷ್ಣ, ಗುತ್ತಿಗೆ ಕಾರ್ಮಿಕ ಸಂಘದ ಪದಾಧಿಕಾರಿಗಳಾದ ಆರ್‌. ಮಂಜುನಾಥ್‌, ಶ್ರೀನಿವಾಸ, ಅಂತೋಣಿ ದಾಸ್‌, ಮುಖಂಡರಾದ ಅರುಣ್‌, ವಿನಯ್‌ಕುಮಾರ್‌, ಗಿರೀಶ್‌, ಶೇಷಪ್ಪ ಗೌಡ, ದೇವರಾಜ್‌ ಸಿಂಗ್‌, ವಿಕ್ಟರ್‌, ಕಾಂತರಾಜ್‌, ಗುರುರಾಜ್‌, ಮಂಜು, ಮಾದೇವ ಸೇರಿದಂತೆ ನೂರಾರು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ