ಆ್ಯಪ್ನಗರ

ವೃಂದಾವನ ಧ್ವಂಸ: ಕ್ರಮಕ್ಕೆ ಆಗ್ರಹ

ಗಂಗಾವತಿ ತಾಲೂಕಿನ ಆನೆಗುಂದಿ ತುಂಗಾಭದ್ರ ನಡುಗುಡ್ಡೆಯಲ್ಲಿರುವ ವ್ಯಾಸರಾಜರ ವೃಂದಾವನ ಧ್ವಂಸಗೊಳಿಸಿರುವ ದುಷ್ಕರ್ಮಿಗಳನ್ನು ತಕ್ಷ ಣ ಬಂಧಿಸುವಂತೆ ಒತ್ತಾಯಿಸಿ ಶುಕ್ರವಾರ ಮಾಧ್ವ ಸಂಘದಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 20 Jul 2019, 5:00 am
ಸಾಗರ: ಗಂಗಾವತಿ ತಾಲೂಕಿನ ಆನೆಗುಂದಿ ತುಂಗಾಭದ್ರ ನಡುಗುಡ್ಡೆಯಲ್ಲಿರುವ ವ್ಯಾಸರಾಜರ ವೃಂದಾವನ ಧ್ವಂಸಗೊಳಿಸಿರುವ ದುಷ್ಕರ್ಮಿಗಳನ್ನು ತಕ್ಷ ಣ ಬಂಧಿಸುವಂತೆ ಒತ್ತಾಯಿಸಿ ಶುಕ್ರವಾರ ಮಾಧ್ವ ಸಂಘದಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web SMR-19SGR7


ವಿಜಯನಗರ ಸಾಮ್ರಾಜ್ಯದ ರಾಜಗುರುಗಳಾಗಿದ್ದ ವ್ಯಾಸರಾಜರ ವೃಂದಾವನ ಅನೇಕ ಯುದ್ಧಗಳ ಸಂದರ್ಭದಲ್ಲಿಯೂ ಹಾನಿಗೊಂಡಿರಲಿಲ್ಲ.

ಇತ್ತೀಚೆಗೆ ಹಂಪಿಯಲ್ಲಿ ಅನೇಕ ಕಂಬಗಳನ್ನು ಉರುಳಿಸಿ ಹಾಕಿದ್ದು, ಈಗ ವ್ಯಾಸರಾಜರ ವೃಂದಾವನ ಧ್ವಂಸಗೊಳಿಸಲಾಗಿದೆ. ಸರಕಾರ ತಕ್ಷ ಣ ವೃಂದಾವನ ಧ್ವಂಸಗೊಳಿಸಿದ ದುಷ್ಕರ್ಮಿಗಳನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಡಾ. ಗುರುರಾಜ ಕಲ್ಲಾಪುರ, ವೈ.ಮೋಹನ್‌, ಕೆ.ಆರ್‌.ರಾಜಗೋಪಾಲ್‌, ಸತ್ಯಶೀಲ, ದೀಪಕ್‌ ಸಾಗರ್‌, ಆನಂದ್‌ ಕಲ್ಯಾಣಿ, ರೇವತಿ ಹತ್ವಾರ್‌, ಮಂಜುಳಾ ಬದರಿನಾಥ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ