ಆ್ಯಪ್ನಗರ

ಹೊಳೆಹೊನ್ನೂರಿನಲ್ಲಿ ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಹಾಮಳೆಗೆ ಹೋಬಳಿಯ ಜನತೆ ಕಂಗೆಟ್ಟಿದ್ದಾರೆ.

Vijaya Karnataka 7 Aug 2019, 10:10 pm
ಹೊಳೆಹೊನ್ನೂರು: ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಹಾಮಳೆಗೆ ಹೋಬಳಿಯ ಜನತೆ ಕಂಗೆಟ್ಟಿದ್ದಾರೆ.
Vijaya Karnataka Web SMR-6rpt2


ಪಟ್ಟಣದ ಉಪ್ಪಾರ ಬೀದಿಯಲ್ಲಿ ಎಚ್‌.ಜಿ.ಚಂದ್ರಪ್ಪ ಹಾಗೂ ಹೊನ್ನೂರಮ್ಮ ನಗರದಲ್ಲಿ ರತ್ನಮ್ಮ ಅವರ ಮನೆಯ ಗೋಡೆ ಕುಸಿದಿವೆ. ಮಳೆಯಿಂದಾಗಿ ಹಳ್ಳ, ಕೆರೆ, ಕಟ್ಟೆಗಳಿಗೆ ನೀರು ಹರಿದುಬರುತ್ತಿದೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಪಟ್ಟಣದ ಎಲ್ಲೆಡೆ ಸಂಗ್ರಹವಾಗಿದ್ದ ಪ್ಲಾಸ್ಟಿಕ್‌ ಕಸದ ರಾಶಿ ಕಾಲುವೆಗಳಲ್ಲಿ ಸಿಲುಕಿಕೊಂಡು ನೀರು ಕಾಲುವೆ ತುಂಬಿ ರಸ್ತೆ ಮೇಲೆ ಹರಿಯುತ್ತಿದೆ. ತುಂಗಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಶ್ರೀ ಕ್ಷೇತ್ರ ಕೂಡ್ಲಿ ಸಂಗಮದಿಂದ ತುಂಗಾ ನೀರು ಭದ್ರಾನದಿ ನೀರನ್ನು ಒತ್ತಿರುವುದರಿಂದ ಸಿದ್ಲೀಪುರ ರಸ್ತೆಯಲ್ಲಿ ಭದ್ರಾ ನದಿ ಸಮೀಪವಿರುವ ಮನೆಗಳಿಗೆ ನೀರು ನುಗ್ಗುವ ಸಂಭವ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಂದಾಯ ಇಲಾಖೆ ಅಧಿಕಾರಿಗಳು ಅಪಾಯದಂಚಿನಲ್ಲಿರುವ ಮನೆಗಳಿಗೆ ತೆರಳಿ ಮನೆ ತೆರವು ಮಾಡುವಂತೆ ಸೂಚಿಸಿದ್ದು, ಗಂಜಿಕೇಂದ್ರಕ್ಕೆ ಹಿಂದುಳಿದ ವರ್ಗಗಳ ಬಾಲಕ ವಿದ್ಯಾರ್ಥಿ ನಿಲಯದಲ್ಲಿ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ.

ತೀವ್ರ ಮಳೆಯಿಂದಾಗಿ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಪಟ್ಟಣದಲ್ಲಿ ಜನರ ಓಡಾಟ ತುಂಬಾ ವಿರಳವಾಗಿತ್ತು. ಕೆಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ