ಆ್ಯಪ್ನಗರ

ಸ್ಮಶಾನ ಭೂಮಿಯಲ್ಲೇ ನೀರಿನ ಟ್ಯಾಂಕ್‌: ಈಶ್ವರಪ್ಪ

ಯಾವುದೇ ಗೋರಿಗಳಿಗೆ ಧಕ್ಕೆಯಾಗದಂತೆ ಕ್ರೈಸ್ತ ಸಮುದಾಯದ ಸ್ಮಶಾನ ಭೂಮಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಿಸಲಾಗುತ್ತದೆ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದರು.

Vijaya Karnataka 29 Nov 2018, 5:00 am
ಶಿವಮೊಗ್ಗ : ಯಾವುದೇ ಗೋರಿಗಳಿಗೆ ಧಕ್ಕೆಯಾಗದಂತೆ ಕ್ರೈಸ್ತ ಸಮುದಾಯದ ಸ್ಮಶಾನ ಭೂಮಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಿಸಲಾಗುತ್ತದೆ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದರು.
Vijaya Karnataka Web water tank on the cemetery
ಸ್ಮಶಾನ ಭೂಮಿಯಲ್ಲೇ ನೀರಿನ ಟ್ಯಾಂಕ್‌: ಈಶ್ವರಪ್ಪ


ಮಹಾನಗರ ಪಾಲಿಕೆಯಲ್ಲಿ ಬುಧವಾರ ಮೇಯರ್‌ ಮತ್ತು ಉಪ ಮೇಯರ್‌ ಚುನಾವಣೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸ್ಮಶಾನ ಭೂಮಿಯು ಮಹಾನಗರ ಪಾಲಿಕೆ ಸೇರಿದ್ದೆಂದು ದಾಖಲೆಗಳಿಂದ ದೃಢಪಟ್ಟಿದೆ. ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಬೇರೆ ಕಡೆ ಭೂಮಿ ಇಲ್ಲ. ಹೀಗಾಗಿ, ಯಾವುದೇ ಗೋರಿಗಳಿಗೆ ಧಕ್ಕೆಯಾಗದಂತೆ ಟ್ಯಾಂಕ್‌ ನಿರ್ಮಿಸಲಾಗುತ್ತದೆ ಎಂದರು.

ಹಿರಿಯರ ಹೋರಾಟ, ಕಾರ್ಯಕರ್ತರ ಶ್ರಮದಿಂದಾಗಿ ಪಾಲಿಕೆಯಲ್ಲಿ ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ನಗರ ಮತದಾರರ ಋುಣ ನಮ್ಮ ಮೇಲಿದೆ. ಅವರ ನಿರೀಕ್ಷೆಯನ್ನು ಸುಳ್ಳು ಮಾಡದೆ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಜನರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ನೇರವಾಗಿ ಪಾಲಿಕೆ, ಮೇಯರ್‌, ಉಪ ಮೇಯರ್‌ ಅಥವಾ ತಮ್ಮನ್ನು ಸಂಪರ್ಕಿಸಿದಲ್ಲಿ ಬಗೆಹರಿಸಿಕೊಡಲಾಗುತ್ತದೆ ಎಂದರು.

ರಾಜ್ಯ ಸರಕಾರ ಮೇಕೆದಾಟು ಯೋಜನೆ, ಕಳಸಾ ಬಂಡೂರಿ ಸೇರಿದಂತೆ ಯಾವುದೇ ಯೋಜನೆಗಳಲ್ಲಿ ಸ್ವಲ್ಪವೂ ಪ್ರಗತಿ ಸಾಧಿಸಿಲ್ಲ. ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ಜಾರಿಗೊಳಿಸಬೇಕಾದ ಸರಕಾರ ನಿರ್ಲಕ್ಷ್ಯ ತಾಳಿದೆ ಎಂದು ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ