ಆ್ಯಪ್ನಗರ

ಡಿಕೆಶಿ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಬಿಎಸ್‌ವೈ

ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವೇಳೆ ರಾಜ್ಯದಲ್ಲಿಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಅವರ ಗಮನ ಸೆಳೆದು ಹೆಚ್ಚಿನ ಅನುದಾನ ತರಿಸಿಕೊಳ್ಳುವ ನಿಟ್ಟಿನಲ್ಲಿಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Vijaya Karnataka 1 Sep 2019, 5:00 am
ಶಿವಮೊಗ್ಗ: ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವೇಳೆ ರಾಜ್ಯದಲ್ಲಿಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಅವರ ಗಮನ ಸೆಳೆದು ಹೆಚ್ಚಿನ ಅನುದಾನ ತರಿಸಿಕೊಳ್ಳುವ ನಿಟ್ಟಿನಲ್ಲಿಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.
Vijaya Karnataka Web we have nothing to do with the dkss case
ಡಿಕೆಶಿ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಬಿಎಸ್‌ವೈ


ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಸೆ. 7ಮತ್ತು 8ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭ ರಾಜಭವನದಲ್ಲಿರಾಜ್ಯದ ಪ್ರವಾಹ ಪರಿಸ್ಥಿತಿಗಳ ಬಗ್ಗೆ ಅವರಿಗೆ ವಿವರಿಸಲಾಗುವುದು. ಅವರು ಒಪ್ಪಿಗೆ ನೀಡಿದರೆ, ಸಭೆ ನಡೆಸಿ ಮನವರಿಕೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿಉಂಟಾಗಿರುವ ನೆರೆ ಪರಿಸ್ಥಿತಿ ಬಗ್ಗೆ ಕೇಂದ್ರದ ತಂಡ ಈಗಾಗಲೇ ಸಮೀಕ್ಷೆ ನಡೆಸಿದೆ. ಹೀಗಾಗಿ, ನೆರೆ ಪರಿಹಾರಕ್ಕೆ ಹೆಚ್ಚಿನ ಅನುದಾನದ ನಿರೀಕ್ಷೆ ಇದೆ. ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿಹೆಚ್ಚಿನ ಅನಾಹುತ ಸಂಭವಿಸಿವೆ. ಈ ಹಿನ್ನೆಲೆಯಲ್ಲಿಪರಿಹಾರ ನಿರೀಕ್ಷೆಯಂತೆ ದೊರೆಯಲಿದೆ ಎಂದರು.

ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಶೀಘ್ರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುತ್ತಿದೆ. ನೆರೆ ಹಾನಿಗೆ ಒಳಗಾದ ಪ್ರತಿಯೊಬ್ಬರಿಗೂ ಯಾವುದೇ ಚೌಕಾಸಿ ಇಲ್ಲದೇ ಪರಿಹಾರ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಇಡಿ ವಿಚಾರಣೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಡಿ.ಕೆ.ಶಿವಕುಮಾರ್‌ ಅವರ ಇಡಿ ವಿಚಾರಣೆಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ