ಆ್ಯಪ್ನಗರ

ಸಚಿವ ಪ್ರಿಯಾಂಕಖರ್ಗೆಗೆ ಸ್ವಾಗತ

ಪಟ್ಟಣಕ್ಕೆ ಭಾನುವಾರ ಆಗಮಿಸಿದ ರಾಜ್ಯ ಸಮಾಜಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ವಿನಾಯಕ ವೃತ್ತದಲ್ಲಿ ಸಮ್ಮಿಶ್ರ ಸರಕಾರದ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು.

Vijaya Karnataka 29 Jan 2019, 5:00 am
ರಿಪ್ಪನ್‌ಪೇಟೆ: ಪಟ್ಟಣಕ್ಕೆ ಭಾನುವಾರ ಆಗಮಿಸಿದ ರಾಜ್ಯ ಸಮಾಜಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ವಿನಾಯಕ ವೃತ್ತದಲ್ಲಿ ಸಮ್ಮಿಶ್ರ ಸರಕಾರದ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು.
Vijaya Karnataka Web SMR-28RPT1


ಪ್ರಥಮಬಾರಿಗೆ ಪಟ್ಟಣಕ್ಕೆ ಆಗಮಿಸಿದ ಸಮಾಜಕಲ್ಯಾಣ ಸಚಿವರನ್ನು ಕಾರ್ಯಕರ್ತರು ಅಭಿನಂದಿಸುವುದರೊಂದಿಗೆ ಸೆಲ್ಫಿ ಮತ್ತು ಪೋಟೋ ತೆಗೆಸಿಕೊಳ್ಳಲು ಮುಗಿಬಿದ್ದರು. ಖಾಸಗಿ ಮದುವೆ ನಿಮಿತ್ತ ಆಗಮಿಸಿದ್ದ ಪ್ರಿಯಾಂಕ ಖರ್ಗೆ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರೊಂದಿಗೆ ಕೆಲಸಮಯ ಕಳೆದು ಹಲವು ಜನಪರ ಕಾರ್ಯಕ್ರಮ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಿದ್ದಾರೆ. ಕಾಂಗ್ರೆಸ್‌ ಮುಖಂಡರಾದ ಎಂ.ಬಿ.ಲಕ್ಷ ್ಮಣಗೌಡ, ಕೆಂಚನಾಲ ಗ್ರಾ.ಪಂ. ಸದಸ್ಯ ಉಬೇದುಲ್ಲಾ ಷರೀಫ್‌, ಮಹಮದ್‌ಷರೀಫ್‌, ಚಂದಾಳದಿಂಬ ಡಾಕಪ್ಪ, ಫ್ಯಾನ್ಸಿ ರಮೇಶ್‌, ಪ.ನಾ.ಜಗದೀಶ್‌, ನಾಗರಾಜ್‌, ಆಶೀಫ್‌, ಎನ್‌.ವರ್ತೇಶ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ