ಆ್ಯಪ್ನಗರ

ಕಸ್ತೂರಿ ರಂಗನ್ ದೇವಮಾನವನಾ..? ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಕುಶಾಲಪ್ಪ

ಮರ ನಟ್ಟಿದ್ದು ನಮ್ಮ ಅಜ್ಜ..! ನಾವೇ ಉಳಿಸಿಕೊಂಡು ಬಂದಿದ್ದೇವೆ.‌ ಮರ ಏನಾದರೂ ಗಾಳಿಗೆ ಬಿದ್ದರೆ ಅಳ್ತಾರೆ. ಅದೇ ಜಾಗಕ್ಕೆ ಗಿಡ ನೆಡ್ತಾರೆ. ಯಾವನೋ ಹೇಳ್ತಾನೆ ಅಂತ ಹೀಗೆ ಗಿಡ ನೆಡಬೇಕು, ಇಲ್ಲಿ ನೆಡಬೇಕು,

Lipi 16 May 2022, 9:06 pm
ಶಿವಮೊಗ್ಗ: ಜಿಲ್ಲೆಯ ಅರಣ್ಯ, ಒತ್ತುವರಿ, ಕಂದಾಯಭೂಮಿ, ಹಕ್ಕುಪತ್ರ, ವ್ಯಾಜ್ಯೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿದ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಕಸ್ತೂರಿ ರಂಗನ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
Vijaya Karnataka Web ಪಶ್ಚಿಮ ಘಟ್ಟ
ಪಶ್ಚಿಮ ಘಟ್ಟ


ಯಾರಿಗೂ ತೊಂದರೆಯಾಗಬಾರದು ಎಂಬುದು ನಮ್ಮ ಕಾಳಜಿ, ರೈತರಿಗೂ ತೊಂದರೆ ಆಗಬಾರದಲ್ವಾ..? ನಮ್ಮ ಅಪ್ಪನ ಆಸ್ತಿ ನಾವು ಪಡೆದಿರುತ್ತೇವೆ, ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತು ವರದಿ ನೀಡಿರುವ ಕಸ್ತೂರಿ ರಂಗನ್ ಏನು ದೇವಮಾನವನಾ..? ಯಾವನೋ ಹೇಳ್ತಾನೆ ಅಂತ ಎಲ್ಲ ಕೇಳೋಕೆ ಆಗಲ್ಲ, ಇವೆಲ್ಲಾ ಆಗೋದಿಲ್ಲ ಎಂದು ಶಿವಮೊಗ್ಗದಲ್ಲಿ ಕುಶಾಲಪ್ಪ ಹೇಳಿದರು.

ಮಲೆನಾಡಿನ ಕಾಡಂಚಿನ ಗ್ರಾಮಗಳಲ್ಲಿ ವನ್ಯ ಜೀವಿ ಹಾವಳಿ..! ಜನರಿಗೆ ಪ್ರಾಣ ಭೀತಿ..!

ಅರಣ್ಯ ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಒತ್ತುವರಿಗೆ ಸಂಬಂಧಿಸಿದಂತೆ ಶಿವಮೊಗ್ಗ ವಲಯದಲ್ಲಿ 12700 ಪ್ರಕರಣಗಳಿದ್ದು 12,300 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಭದ್ರಾವತಿ ವಲಯದಲ್ಲಿ 972 ಪ್ರಕರಣಗಳಿದ್ದು 18049 ಎಕ್ರೆ ಒತ್ತುವರಿಯಾಗಿದೆ. ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಯಾವುದೇ ಆದೇಶ ಅನುಷ್ಟಾನಕ್ಕೆ ಜಿಲ್ಲೆಯಲ್ಲಿ ಬಾಕಿಯಿರುವುದಿಲ್ಲ. ಇದೇ ರೀತಿ ಅರಣ್ಯ ಹಕ್ಕುಗಳಿಗಾಗಿ ಒಟ್ಟು 97085 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು 2444 ಪ್ರಕರಣಗಳಲ್ಲಿ 3127 ಎಕರೆ ಜಮೀನಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನು 42422 ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.


ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಅರಣ್ಯ ಸಂರಕ್ಷಣೆ ಕುರಿತಾಗಿ ಅರಿವು ಮೂಡಿಸಲು ಗ್ರಾಮ ಅರಣ್ಯ ಸಮಿತಿಗಳನ್ನು ಇನ್ನಷ್ಟು ಸಕ್ರಿಯಗೊಳಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಗೃತಿ ಮೂಡಿದರೆ ಮಾತ್ರ ಅರಣ್ಯ ಸಂರಕ್ಷಣೆ ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಿದೆ ಎಂದು ಅವರು ಹೇಳಿದರು.

ದೇಶದ 36 ಸಾವಿರ ದೇಗುಲಗಳನ್ನ ಜೀರ್ಣೋದ್ಧಾರ ಮಾಡ್ತೀವಿ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

ಅರಣ್ಯ ಇಲಾಖೆ ವತಿಯಿಂದ ಕೇವಲ ನಾಮಕಾವಸ್ತೆಗೆ ಗಿಡಗಳನ್ನು ನೆಡುವ ಕಾರ್ಯ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಸಮುದಾಯದ ಸಹಭಾಗಿತ್ವದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಆದಿವಾಸಿಗಳ ಹಾಡಿಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡಬೇಕು. ಕಾವಾಡಿಗರು ಸೇವಾ ಭದ್ರತೆ ಒದಗಿಸುವ ಕುರಿತು ಮನವಿಯನ್ನು ನೀಡಿದ್ದು, ಈ ಕುರಿತು ಪರಿಶೀಲಿಸಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ