ಆ್ಯಪ್ನಗರ

ಪತ್ನಿ ಸಾವು: ಗಂಡನ ಮನೆ ಎದುರು ಶವ ಇಟ್ಟು ಪ್ರತಿಭಟನೆ

ಪತಿ ಕಿರುಕುಳಕ್ಕೆ ಬೇಸತ್ತು ಊಟ, ನಿದ್ರೆ ಬಿಟ್ಟು ಅಸ್ವಸ್ಥಗೊಂಡಿದ್ದ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಸೋಮವಾರ ತಾಲೂಕಿನ ಕಾಗಿನಲ್ಲಿ ಗ್ರಾಮದ ಗಂಡನ ಮನೆ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದರು.

Vijaya Karnataka 12 Jun 2019, 5:00 am
ಶಿಕಾರಿಪುರ: ಪತಿ ಕಿರುಕುಳಕ್ಕೆ ಬೇಸತ್ತು ಊಟ, ನಿದ್ರೆ ಬಿಟ್ಟು ಅಸ್ವಸ್ಥಗೊಂಡಿದ್ದ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಸೋಮವಾರ ತಾಲೂಕಿನ ಕಾಗಿನಲ್ಲಿ ಗ್ರಾಮದ ಗಂಡನ ಮನೆ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದರು.
Vijaya Karnataka Web SMR-11SKP2


ಚೈತ್ರಾ (26) ಮೃತ ಮಹಿಳೆ. ಕಾಗಿನಲ್ಲಿ ಮೂಲದ ಈಕೆ ತಂದೆ ದೊಡ್ಡಬಳ್ಳಾಪುರದಲ್ಲಿ ವಾಸವಿದ್ದರು. ಕಾಗಿನಲ್ಲಿ ಮೂಲದ ಇದೀಗ ಬೆಂಗಳೂರಿನಲ್ಲಿ ವಾಸವಿರುವ ರಾಜು ಎಂಬುವರೊಂದಿಗೆ ಎರಡು ವರ್ಷದ ಹಿಂದೆ ಮದುವೆಯಾಗಿ, ಗಂಡನ ಜತೆಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಗಂಡ, ಮತ್ತವರ ಮನೆಯವರ ಕಿರುಕುಳಕ್ಕೆ ಬೇಸತ್ತು ತವರು ಮನೆಗೆ ವಾಪಸ್ಸಾಗಿದ್ದ ಈಕೆ ಊಟ, ನಿದ್ರೆ ಬಿಟ್ಟು ಅಸ್ವಸ್ಥರಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಬೆಂಗಳೂರಿನ ಸೂರ‍್ಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಮನೆ ಖಾಲಿ ಮಾಡಿದ್ದ ಕುಟುಂಬದವರು ಬಾರದ ಕಾರಣ ಪೊಲೀಸರು ಮಧ್ಯಪ್ರವೇಶಿಸಿ ಮರಣೋತ್ತರ ಪರೀಕ್ಷೆ ನಡೆಸಿ, ಶವಸಂಸ್ಕಾರ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ