ಆ್ಯಪ್ನಗರ

ಶಿವಮೊಗ್ಗ, ಮಂಡ್ಯದಲ್ಲೂ ಗೆಲುವು : ಬಿಎಸ್‌ವೈ ವಿಶ್ವಾಸ

ಮೂರು ಲೋಕಸಭಾ ಕ್ಷೇತ್ರದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಈಗಾಗಲೇ ಬಿಜೆಪಿ ಗೆದ್ದಿದೆ. ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸುವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Vijaya Karnataka 27 Oct 2018, 5:00 am
ಸಾಗರ : ಮೂರು ಲೋಕಸಭಾ ಕ್ಷೇತ್ರದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಈಗಾಗಲೇ ಬಿಜೆಪಿ ಗೆದ್ದಿದೆ. ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸುವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web SMR-26sgr6


ಇಲ್ಲಿನ ಕಾನ್ಲೆಛತ್ರ ಬಳಿ ಗುರುವಾರ ಬಿಜೆಪಿ ವತಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಬೃಹತ್‌ ರೋಡ್‌ ಶೋ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಕಳೆದ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಲೋಕಸಭಾ ಕ್ಷೇತ್ರವ್ಯಾಪ್ತಿಯ ಮತದಾರರು 3.65 ಲಕ್ಷ ಕ್ಕೂ ಅಧಿಕ ಅಂತರದ ಮತದಿಂದ ನನ್ನನ್ನು ಗೆಲ್ಲಿಸಿದ್ದರು. ದೇಶದಲ್ಲಿ ಆರನೇ ಅತಿಹೆಚ್ಚು ಮತದಿಂದ ಜಯಗಳಿಸಿದ ಹೆಗ್ಗಳಿಕೆಯನ್ನು ಮತದಾರರು ನನಗೆ ನೀಡಿದ್ದಾರೆ. ಇದಕ್ಕೆ ನಾನು ಮತದಾರರಿಗೆ ಚಿರಋುಣಿ. ಹಾಲಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧೆ ಮಾಡಿರುವ ಬಿ.ವೈ.ರಾಘವೇಂದ್ರ ಅವರನ್ನು ಸಹ ಅಷ್ಟೇ ಬಹುಮತದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾತನಾಡಿ, ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಉತ್ತಮ ವಾತಾವರಣ ಇದೆ. ಬಿ.ಎಸ್‌.ಯಡಿಯೂರಪ್ಪ ಅವರ ಅಭಿವೃದ್ಧಿಪರ ಕೆಲಸಕಾರ‍್ಯ ಮತದಾರರ ಮನಸ್ಸಿನಲ್ಲಿ ಬಿಜೆಪಿ ನೆಲೆಯೂರಲು ಕಾರಣವಾಗಿದೆ ಎಂದರು. ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ, ಎಸ್‌.ದತ್ತಾತ್ರಿ, ಟಿ.ಡಿ.ಮೇಘರಾಜ್‌, ಪ್ರಸನ್ನ ಕೆರೆಕೈ, ಶಿವಕುಮಾರ್‌ ಉದಾಸಿ , ಸ್ಥಳೀಯ ಘಟಕಗಳ ಪದಾಧಿಕಾರಿಗಳು ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ