ಆ್ಯಪ್ನಗರ

ಮಹಿಳೆಯರ ಗೌರವಿಸುವ ಮನೋಭಾವ ಹೆಚ್ಚಲಿ

ಕೌಟುಂಬಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡುವ ಮನೋಭಾವ ಹೆಚ್ಚಾಗಬೇಕೆಂದು ಮಾಜಿ ಸಚಿವ ಕಾಗೋಡುತಿಮ್ಮಪ್ಪ ಹೇಳಿದರು.

Vijaya Karnataka 14 Mar 2019, 5:00 am
ಸಾಗರ : ಕೌಟುಂಬಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡುವ ಮನೋಭಾವ ಹೆಚ್ಚಾಗಬೇಕೆಂದು ಮಾಜಿ ಸಚಿವ ಕಾಗೋಡುತಿಮ್ಮಪ್ಪ ಹೇಳಿದರು.
Vijaya Karnataka Web SMR-12SGR3


ಇಲ್ಲಿನ ಗಾಂಧಿಮಂದಿರದಲ್ಲಿ ಮಂಗಳವಾರ ಜಿಲ್ಲಾ ಹಾಗೂ ತಾಲೂಕು ಮಹಿಳಾ ಕಾಂಗ್ರೆಸ್‌ ಘಟಕ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ, ಪಕ್ಷ ದ ಹಿರಿಯ ಸಾಧಕ ಮಹಿಳೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಸಮಾನ ಸ್ಥಾನಮಾನ ಕಲ್ಪಿಸುವುದು ಸುಲಭ ಸಾಧ್ಯವಲ್ಲ. ಆದರೆ, ಕಾಂಗ್ರೆಸ್‌ ಮಹಿಳಾ ಮೀಸಲು ಜಾರಿಗೆ ತರುವ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ರಷ್ಟು ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿದೆ ಎಂದರು.

ಅಧ್ಯಕ್ಷ ತೆ ವಹಿಸಿದ್ದ ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ ಮಾತನಾಡಿ, ಮಹಿಳಾ ಕಾಂಗ್ರೆಸ್ಸನ್ನು ತಳಮಟ್ಟದಿಂದ ಗಟ್ಟಿಗೊಳಿಸಲಾಗುತ್ತಿದೆ ಎಂದರು.

ಇದೇ ಸಂದರ್ಭ ಹಿರಿಯರಾದ ಸುನಂದ ಶ್ರೀಧರ್‌, ಶಿರಿಜಾನ್‌, ಕೆರಿಯಮ್ಮ, ಸರಸ್ವತಮ್ಮ ದಾಸಕೊಪ್ಪ, ಮರಿಯಮ್ಮ ಅವರನ್ನು ಸನ್ಮಾನಿಸಲಾಯಿತು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌, ನಗರ ಅಧ್ಯಕ್ಷ ತಶ್ರಿಫ್‌, ಗೌರವಾಧ್ಯಕ್ಷ ಎನ್‌.ಜಿ.ಪೈ, ದೀಪಾ ಕಾಗೋಡು, ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್‌, ಮೈಕಲ್‌ ಡಿಸೋಜ, ಮಹಾಬಲ ಗಣಪತಿ , ವೆಂಕಟೇಶ ಮತ್ತಿತರರು ಇದ್ದರು. ಮಾಲಾ ಕಲ್ಲಪ್ಪ ಪ್ರಾರ್ಥಿಸಿ, ರೇಷ್ಮಾ ಸ್ವಾಗತಿಸಿದರು. ಎನ್‌.ಲಲಿತಮ್ಮ ವಂದಿಸಿ, ಭವಾನಿ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ