ಶಿವಮೊಗ್ಗ : ಮಂಗಳೂರು ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ಎಸಗಿರುವ ಅತ್ಯಾಚಾರ ಖಂಡಿಸಿ ಬುಧವಾರ ನಗರದ ಶಿವಪ್ಪನಾಯಕ ವೃತ್ತದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು .
ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದು ಅಲ್ಲದೇ, ಅತ್ಯಾಚಾರದ ವಿಡಿಯೋ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡುವಲು ಹೊರಟಿರುವ ಇಂತಹ ಸಂಘಟನೆಯನ್ನು ನಿಷೇಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಾದ ಬಸವನಗೌಡ ಬಾದರ್ಲಿ, ಜಿಲ್ಲಾಧ್ಯಕ್ಷ ಎಂ.ಪ್ರವೀಣ್ ಕುಮಾರ್, ಪಾಲಿಕೆ ಸದಸ್ಯ ಎಚ್.ಸಿ.ಯೋಗೀಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೆ. ರಂಗನಾಥ್ , ಪ್ರಮುಖರಾದ ಎಚ್.ಪಿ.ಗಿರೀಶ್, ದರ್ಶನ್ ಉಳ್ಳಿ , ಆರ್. ಕಿರಣ್ , ಶಮೀರ್ ಖಾನ್, ಮೊಹಮ್ಮದ್ ಆರಿಫುಲ್ಲಾ , ಡಿ.ಆರ್. ಗಿರೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ಶರವಣ ,ಮಸ್ತಾನ್ ಮತ್ತಿತರರು ಹಾಜರಿದ್ದರು.
ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದು ಅಲ್ಲದೇ, ಅತ್ಯಾಚಾರದ ವಿಡಿಯೋ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡುವಲು ಹೊರಟಿರುವ ಇಂತಹ ಸಂಘಟನೆಯನ್ನು ನಿಷೇಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಾದ ಬಸವನಗೌಡ ಬಾದರ್ಲಿ, ಜಿಲ್ಲಾಧ್ಯಕ್ಷ ಎಂ.ಪ್ರವೀಣ್ ಕುಮಾರ್, ಪಾಲಿಕೆ ಸದಸ್ಯ ಎಚ್.ಸಿ.ಯೋಗೀಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೆ. ರಂಗನಾಥ್ , ಪ್ರಮುಖರಾದ ಎಚ್.ಪಿ.ಗಿರೀಶ್, ದರ್ಶನ್ ಉಳ್ಳಿ , ಆರ್. ಕಿರಣ್ , ಶಮೀರ್ ಖಾನ್, ಮೊಹಮ್ಮದ್ ಆರಿಫುಲ್ಲಾ , ಡಿ.ಆರ್. ಗಿರೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ಶರವಣ ,ಮಸ್ತಾನ್ ಮತ್ತಿತರರು ಹಾಜರಿದ್ದರು.