ಆ್ಯಪ್ನಗರ

ಜೂನ್‌ವರೆಗೆ ನೀರಿನ ತೊಂದರೆ ಇಲ್ಲ: ಸಿಎಂ

ರಾಜ್ಯದಲ್ಲಿ 2017 ಜೂನ್‌ವರೆಗೆ ಸಾಕಾಗುವಷ್ಟು ನೀರು ಲಭ್ಯವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಕ ಸುದ್ದಿಲೋಕ 5 Oct 2016, 12:25 pm
ತುಮಕೂರು: ರಾಜ್ಯದಲ್ಲಿ 2017 ಜೂನ್‌ವರೆಗೆ ಸಾಕಾಗುವಷ್ಟು ನೀರು ಲಭ್ಯವಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Vijaya Karnataka Web  no water problem to till june 2017 cm siddaramaia
ಜೂನ್‌ವರೆಗೆ ನೀರಿನ ತೊಂದರೆ ಇಲ್ಲ: ಸಿಎಂ


ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಮೂರು ದಿನಗಳ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟನೆಗಾಗಿ ಬುಧವಾರ ತುಮಕೂರಿಗೆ ಆಗಮಿಸಿರುವ ಸಿದ್ಧರಾಮಯ್ಯ, ಶಿವಕುಮಾರ ಸ್ವಾಮಿಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

'ಸುಪ್ರೀಂಕೋರ್ಟ್‌ ಆದೇಶದಂತೆ ಮತ್ತೆ ನೀರು ಬಿಡುವುದರಿಂದ ಕುಡಿಯುವ ನೀರಿಗೆ ತೊಂದರೆ ಆಗುವುದಿಲ್ಲ. ಜೂನ್‌ವರೆಗೆ ನೀರಿನ ಸಮಸ್ಯೆ ಆಗುವುದಿಲ್ಲ. ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆ,' ಎಂದಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಮೂರು ದಿನಗಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭಕ್ಕೆ ಸಿಎಂ ಜೊತೆ ಗೃಹ ಸಚಿವ ಪರಮೇಶ್ವರ್, ಜಯಚಂದ್ರ, ತನ್ವೀರ್ ಸೇಠ್, ಮಹದೇವ್ ಪ್ರಸಾದ್ ಸೇರಿದಂತೆ ಜಿಲ್ಲೆಯ ಸಂಸದ ಹಾಗೂ ಶಾಸಕರಾದ ಸುರೇಶ್ ಗೌಡ,ರಫಿಕ್ ಅಹಮದ್ ಆಗಮಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ