ಆ್ಯಪ್ನಗರ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ; ಸಲಿಂಗಕಾಮಿ ಮದರಸಾ ಶಿಕ್ಷಕನಿಗೆ 11 ವರ್ಷ ಜೈಲು ಶಿಕ್ಷೆ

ಮದರಸಾದಲ್ಲಿ ಶಿಕ್ಷಕನಾಗಿದ್ದ ಮುಷರಫ್‌ 2015ರ ಏಪ್ರಿಲ್‌ 17ರಂದು ರೈಲ್ವೆ ಟಿಕೆಟ್‌ ಬುಕಿಂಗ್‌ ಮಾಡುವ ನೆಪದಲ್ಲಿ ನನಗೆ ಕನ್ನಡ ಭಾಷೆ ಅರ್ಥವಾಗದ ಕಾರಣ ಸಹಾಯ ಬೇಕೆಂದು ನಗರದ ರೈಲ್ವೆ ನಿಲ್ದಾಣಕ್ಕೆ ಕರೆದೊಯ್ದಿದ್ದನು. ಬಳಿಕ ತನ್ನ ಬೈಕ್‌ನಲ್ಲಿ ಪೆಟ್ರೋಲ್‌ ಖಾಲಿಯಾಗಿದೆ. ಲಾಡ್ಜ್‌ನಲ್ಲಿ ಉಳಿಯೋಣ ಎಂದು ಬಾಲಕನನ್ನು ಪುಸಲಾಯಿಸಿ ಕರೆದೊಯ್ದು, ಅಲ್ಲಿ ದೌರ್ಜನ್ಯ ಎಸಗಿದ್ದ.

Vijaya Karnataka 2 Aug 2021, 7:26 am
ತುಮಕೂರು: ಆರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಸಲಿಂಗಕಾಮಿ ಮದರಸಾ ಶಿಕ್ಷಕನಿಗೆ 11 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30,000 ರೂ. ದಂಡ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
Vijaya Karnataka Web Crime News


ಉತ್ತರ ಪ್ರದೇಶ ಮೂಲದ ಮಫ್ತಿ ಮುಷರಫ್‌ (42) ಶಿಕ್ಷೆಗೆ ಒಳಗಾದ ಅಪರಾಧಿ. ತುಮಕೂರು ಗ್ರಾಮಾಂತರದ ಅಮಲಾಪುರದ ಮದರಸಾದಲ್ಲಿ ಶಿಕ್ಷಕನಾಗಿದ್ದ ಈತ 2015ರ ಏಪ್ರಿಲ್‌ 17ರಂದು 13 ವರ್ಷದ ಬಾಲಕನ ಮೇಲೆ ಲೈಂಗಿಕ ಕ್ರೌರ್ಯ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್‌.ಕೃಷ್ಣಯ್ಯ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಜತೆಗೆ ಸಂತ್ರಸ್ತ ಬಾಲಕನಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶಿದ್ದಾರೆ.
ಉತ್ತರಾದಿ ಹಾಗೂ ರಾಯರ ಮಠಗಳ ಅರ್ಚಕರ ನಡುವೆ ಗಲಾಟೆ; ವಿಡಿಯೋ ವೈರಲ್‌
ಪ್ರಕರಣದ ಹಿನ್ನೆಲೆ: ಮದರಸಾದಲ್ಲಿ ಶಿಕ್ಷಕನಾಗಿದ್ದ ಮುಷರಫ್‌ 2015ರ ಏಪ್ರಿಲ್‌ 17ರಂದು ರೈಲ್ವೆ ಟಿಕೆಟ್‌ ಬುಕಿಂಗ್‌ ಮಾಡುವ ನೆಪದಲ್ಲಿ ನನಗೆ ಕನ್ನಡ ಭಾಷೆ ಅರ್ಥವಾಗದ ಕಾರಣ ಸಹಾಯ ಬೇಕೆಂದು ನಗರದ ರೈಲ್ವೆ ನಿಲ್ದಾಣಕ್ಕೆ ಕರೆದೊಯ್ದಿದ್ದನು. ಬಳಿಕ ತನ್ನ ಬೈಕ್‌ನಲ್ಲಿ ಪೆಟ್ರೋಲ್‌ ಖಾಲಿಯಾಗಿದೆ. ಲಾಡ್ಜ್‌ನಲ್ಲಿ ಉಳಿಯೋಣ ಎಂದು ಬಾಲಕನನ್ನು ಪುಸಲಾಯಿಸಿ ಕರೆದೊಯ್ದು, ಅಲ್ಲಿ ದೌರ್ಜನ್ಯ ಎಸಗಿದ್ದ. ಮರುದಿನ ಬಾಲಕನನ್ನು ಹಾಸ್ಟೆಲ್‌ನಲ್ಲಿ ಬಿಟ್ಟು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ.

ಮುಂದೆ ತಾಯಿ ಹಾಸ್ಟೆಲ್‌ಗೆ ಬಂದ ಸಂದರ್ಭದಲ್ಲಿ ಬಾಲಕ ಈ ವಿಷಯ ತಿಳಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಕೇಳಿಕೊಂಡಿದ್ದ ತಾಯಿ ಪೊಲೀಸರಿಗೆ ದೂರು ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ