ಆ್ಯಪ್ನಗರ

ಸರಕಾರದಿಂದ ನಯಾಪೈಸೆ ಅನುದಾನ ಬಂದಿಲ್ಲ: ಶಾಸಕ ಮಾಧುಸ್ವಾಮಿ ಅಳಲು

ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ. ಯಾವುದೇ ಇಲಾಖೆಯ ಕಾರ್ಯಕ್ರಮಗಳು ಅನುಷ್ಠಾನಕ್ಕೆ ಬಂದಿಲ್ಲ. ಕೃಷಿ, ತೋಟಗಾರಿಕೆ ಇಲಾಖೆಗಳು ರೈತರಿಗೆ ಸಬ್ಸಿಡಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿಲ್ಲ ಎಂದು ಶಾಸಕ ಜೆ.ಸಿ. ಮಾಧುಸ್ವಾಮಿ ದೂರಿದರು.

Vijaya Karnataka Web 4 Oct 2018, 3:09 pm
ತುಮಕೂರು: ಶಾಸಕರಿಗೆ ಈವರೆಗೆ ಸರಕಾರದಿಂದ ಒಂದು ರೂಪಾಯಿ ಸಹ ಅನುದಾನ ಬಂದಿಲ್ಲ. ಹೀಗಾಗಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿಲ್ಲ ಎಂದು ಚಿಕ್ಕನಾಯಕನಹಳ್ಳಿ ಬಿಜೆಪಿ ಶಾಸಕ ಜೆ.ಸಿ. ಮಾಧುಸ್ವಾಮಿ ಅಸಹಾಯಕತೆ ವ್ಯಕ್ತಪಡಿಸಿದರು.
Vijaya Karnataka Web Tumkur MLA.


ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ. ಯಾವುದೇ ಇಲಾಖೆಯ ಕಾರ್ಯಕ್ರಮಗಳು ಅನುಷ್ಠಾನಕ್ಕೆ ಬಂದಿಲ್ಲ. ಕೃಷಿ, ತೋಟಗಾರಿಕೆ ಇಲಾಖೆಗಳು ರೈತರಿಗೆ ಸಬ್ಸಿಡಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿಲ್ಲ ಎಂದು ದೂರಿದರು.

ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿ ಸುಮ್ಮನೆ ಕುಳಿತುಕೊಂಡಿದ್ದಾರೆ. ನಿಗಮ ಮಂಡಳಿಗಳಿಗೆ ಅನುದಾನ ಬಿಡುಗಡೆಯಾಗಿಲ್ಲ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತೀವ್ರ ಹಿನ್ನಡೆಯಾಗಿದೆ. ಈ ಹಿಂದಿನ ಜಿಲ್ಲಾಧಿಕಾರಿ ಮೋಹನ್ ರಾಜ್, ಚಿಕ್ಕನಾಯಕನಹಳ್ಳಿ ಗಣಿ ಬಾಧಿತ ಪ್ರದೇಶಗಳಲ್ಲಿನ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮವನ್ನು ಮಾಡಿಲ್ಲ. ಯಾವುದೇ ತಾಂತ್ರಿಕ ತಜ್ಞರ ಸಲಹೆ ಪಡೆಯದೆ ಕೇವಲ ಸಭೆಗಳಲ್ಲೇ ಕಾಲಹರಣ ಮಾಡಿದ್ದಾರೆ ಎಂದು ಆರೋಪಿಸಿದರು.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸುವ ನಿರೀಕ್ಷೆ ಇತ್ತು. ಆದರೆ ನಮ್ಮ ನಿರೀಕ್ಷೆ ಹುಸಿಯಾಗಿದೆ. ಅಧಿಕಾರಿಗಳು ಸೌಲಭ್ಯ ಕೇಳಿ ಬರುವ ಸಾರ್ವಜನಿಕರಿಗೆ ಶಾಸಕರುಗಳ ವಿರುದ್ಧ ದೂರು ಹೇಳಿ ಕಳುಹಿಸುತ್ತಿದ್ದಾರೆ. ಆದರೆ ಶಾಸಕರಿಗೆ ಸರಕಾರದಿಂದಲೇ ಅನುದಾನ ನೀಡಿಲ್ಲ ಎಂದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಆರಂಭಿಸಲು ಪಿಡಿಒಗಳು ಮುಂದಾಗುತ್ತಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಕೆಡಿಪಿ ಸಭೆ ಕರೆಯಲು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಲಾಗಿತ್ತು. ಆದರೆ ಇನ್ನೂ ಸಭೆ ಕರೆದಿಲ್ಲ. ಹೇಮಾವತಿ ನೀರು ಎಲ್ಲಿಗೆ ಬಂದಿದೆ, ಎಷ್ಟು ಬಂದಿದೆ ಎಂಬ ಮಾಹಿತಿ ಶಾಸಕರುಗಳಿಗೇ ಇಲ್ಲದಂತಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ