ಆ್ಯಪ್ನಗರ

ಚಿತ್ರದುರ್ಗದಲ್ಲಿ ಬಿಜೆಪಿ ಗೆಲುವು: ವಿಜಯೋತ್ಸವ

ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಅವರ ಗೆಲುವಿನಿಂದ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

Vijaya Karnataka 24 May 2019, 10:16 pm
ಪಾವಗಡ:
Vijaya Karnataka Web bjp wins chitradurga celebration
ಚಿತ್ರದುರ್ಗದಲ್ಲಿ ಬಿಜೆಪಿ ಗೆಲುವು: ವಿಜಯೋತ್ಸವ


ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಅವರ ಗೆಲುವಿನಿಂದ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಪಟ್ಟಣದ ಶ್ರೀಶನಿಮಹಾತ್ಮ ವೃತ್ತದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಜಿ.ಟಿ.ಗಿರೀಶ್‌ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಎರಡನೇ ಬಾರಿ ಪ್ರಧಾನಿಯಾಗುತ್ತಿರುವ ಮೋದಿ ಅವರಿಗೆ ಜೈಕಾರ ಕೂಗಿದ ಕಾರ್ಯಕರ್ತರು, ನಾರಾಯಣಸ್ವಾಮಿ ಗೆಲುವಿಗೆ ವಿಜಯೋತ್ಸವ ಆಚರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಸರ್ಕಲ್‌ ಬಳಿ ಪಟಾಕಿ ಸಿಡಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೋದಿಪರ ಜೈಕಾರ ಕೂಗುತ್ತಾ ಬಿಜೆಪಿ ದೇಶದಲ್ಲಿ ಸಾಧಿಸಿದ ಬಹುದೊಡ್ಡ ಗೆಲುವಿಗೆ ಅದ್ಧೂರಿಯಾಗಿ ವಿಜಯೋತ್ಸವ ಆಚರಿಸಿದರು.

ಚಿತ್ರದುರ್ಗ ಲೋಕಸಭೆ ಕ್ಷೇತ್ರ ಎಸ್‌ಸಿ ಮೀಸಲು ಕ್ಷೇತ್ರವಾದ ಕಾರಣ ಇಲ್ಲಿ ಗೆದ್ದ ಬಹುತೇಕ ಸಂಸದರು ವಲಸಿಗರಾಗಿದ್ದು, ಎ.ನಾರಾಯಣಸ್ವಾಮಿ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾದ ನಂತರ ಚಂದ್ರಪ್ಪ ಮತ್ತು ಆನೇಕಲ್‌ ಎ.ನಾರಾಯಣಸ್ವಾಮಿ ನಡುವೆ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದರೂ ಈ ಇಬ್ಬರ ನಡುವೆ ಸಮಬಲದ ಸ್ಪರ್ಧೆ ಏರ್ಪಟ್ಟಿತ್ತು. ಸಮಿಶ್ರ ಸರಕಾರದ ಅಭ್ಯರ್ಥಿಯಾಗಿದ್ದ ಚಂದ್ರಪ್ಪ ಗೆಲ್ಲುತ್ತಾರೆ ಎಂದು ಹಲವು ಸಮೀಕ್ಷೆಗಳು ಹೇಳಿದರೆ, ಅವು ಬುಡಮೇಲಾಗಿ ಮತದಾರನ ತೀರ್ಪಿನಿಂದ ಬಿ.ಎನ್‌.ಚಂದ್ರಪ್ಪ ಕೇವಲ 5,45,948 ಮತ ಪಡೆದು ಸೋಲೊಪ್ಪಿಕೊಂಡರೆ ಎ.ನಾರಾಯಣಸ್ವಾಮಿ 6,20,015 ಮತ ಗಳಿಸಿ 74,067 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ