ಆ್ಯಪ್ನಗರ

ಬಿಜೆಪಿ ಸಂಭ್ರಮಚಾಚರಣೆ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370 ಹಾಗೂ 35ಎ ವಿಧಿ ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಿರ್ಣಯದ ಹಿನ್ನೆಲೆಯಲ್ಲಿ ನಗರದ ಟೌನ್‌ಹಾಲ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ವಿಶ್ವ ಹಿಂದು ಪರಿಷತ್‌ ಬಜರಂಗದಳದ ಪದಾಧಿಕಾರಿಗಳು ಸೋಮವಾರ ವಿಜಯೋತ್ಸವ ನಡೆಸಿದರು.

Vijaya Karnataka 6 Aug 2019, 5:00 am
ತುಮಕೂರು: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370 ಹಾಗೂ 35ಎ ವಿಧಿ ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಿರ್ಣಯದ ಹಿನ್ನೆಲೆಯಲ್ಲಿ ನಗರದ ಟೌನ್‌ಹಾಲ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ವಿಶ್ವ ಹಿಂದು ಪರಿಷತ್‌ ಬಜರಂಗದಳದ ಪದಾಧಿಕಾರಿಗಳು ಸೋಮವಾರ ವಿಜಯೋತ್ಸವ ನಡೆಸಿದರು.
Vijaya Karnataka Web bjp workers celebration in tumkur
ಬಿಜೆಪಿ ಸಂಭ್ರಮಚಾಚರಣೆ


ಕೇಂದ್ರ ಸರಕಾರದ ಐತಿಹಾಸಿಕ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸಿದ ಕಾರ್ಯಕತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಷಾ ನಿರ್ಧಾರಕ್ಕೆ ಸ್ವಾಗತ ಕೋರಿ ಹರ್ಷ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ನುಡಿದಂತೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ವಿಧಿಯನ್ನು ರದ್ದುಗೊಳಿಸಿದೆ. ಇದರಿಂದ ಇಡೀ ಭಾರತ ಒಂದು ಎನ್ನುವ ಭಾವನೆ ನಮ್ಮೆಲ್ಲರಲ್ಲಿ ಮೂಡಿದೆ. ಇತರೆ ರಾಜ್ಯಗಳಂತೆಯೇ ಇನ್ನು ಮುಂದೆ ಕಾಶ್ಮೀರಕ್ಕೂ ಸಂವಿಧಾನದ ಎಲ್ಲಾ ಕಾನೂನುಗಳು ಅನ್ವಯವಾಗಲಿವೆ. ಈ ಮಹತ್ವದ ನಿರ್ಧಾರಕ್ಕೆ ಅಭಿನಂದನೀಯ ಎಂದು ಮೋದಿ ಪರ ಘೋಷಣೆ ಮೊಳಗಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್‌. ಎಂ. ರವೀಶ್‌ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಆದ ಸಂಭ್ರಮದ ವಾತಾವರಣ ಎಲ್ಲೆಡೆ ಮೂಡಿದೆ. ಮೋದಿ ಅವರು ಎರಡನೇ ಬಾರಿ ಅಧಿಕಾರ ವಹಿಸಿಕೊಂಡ 64ನೇ ದಿನಕ್ಕೆ ಈ ಮಹತ್ವದ ನಿರ್ಣಯ ತೆಗೆದುಕೊಂಡಿದ್ದಾರೆ. ಇದು ಅತ್ಯಂತ ಒಳ್ಳೆಯ ನಿರ್ಧಾರ ಎಂದು ಸಂತಸ ವ್ಯಕ್ತಪಡಿಸಿದರು.

ನೂರಾರು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದು, ಎಲ್ಲರಿಗೂ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ