ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಕ್ಷೇತ್ರದ ಗೆಲುವು ಕಾಣುವ ಮೂಲಕ ಇತಿಹಾಸ ಸೃಷ್ಟಿ: ವಿಜಯೇಂದ್ರ
ನಗರದ ಕೋಟೆ ಬಡಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಏರ್ಪಡಿಸಿದ್ದ ಬೂತ್ಮಟ್ಟದ ಸಭೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದ ಚುನಾವಣೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮತದಿಂದ ಬಿಜೆಪಿ ಗೆಲ್ಲಿಸಿದ್ದೇವೆ. ಅಲ್ಲಿಯೂ ಸಹ ಒಂದು ಬಾರಿಯೂ ಬಿಜೆಪಿ ಗೆದ್ದಿರಲಿಲ್ಲ.
Agencies 22 Sep 2020, 7:21 am
ಶಿರಾ: ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರವನ್ನು ಯಾವ ರೀತಿಯಲ್ಲಿ ಪಕ್ಷವು ತನ್ನ ತೆಕ್ಕೆಗೆ ತೆಗೆದುಕೊಂಡಿತೋ, ಅದೇ ರೀತಿ ಶಿರಾ ವಿಧಾನಸಭಾ ಕ್ಷೇತ್ರವನ್ನೂ ಕೈವಶ ಮಾಡಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದರು.
ನಗರದ ಕೋಟೆ ಬಡಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಏರ್ಪಡಿಸಿದ್ದ ಬೂತ್ಮಟ್ಟದ ಸಭೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದ ಚುನಾವಣೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮತದಿಂದ ಬಿಜೆಪಿ ಗೆಲ್ಲಿಸಿದ್ದೇವೆ. ಅಲ್ಲಿಯೂ ಸಹ ಒಂದು ಬಾರಿಯೂ ಬಿಜೆಪಿ ಗೆದ್ದಿರಲಿಲ್ಲ.
ಅದೇ ರೀತಿ ಶಿರಾ ಕ್ಷೇತ್ರದಲ್ಲಿ ಸಹ ಬಿಜೆಪಿ ಅಭ್ಯರ್ಥಿ ಎಂದೂ ಗೆದ್ದಿಲ್ಲಎಂಬ ಮಾತನ್ನು ಅಳಿಸಿ ಹಾಕುವ ಮೂಲಕ ಕಮಲವನ್ನು ಅರಳಿಸುತ್ತೇವೆ ಎಂದರು. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗ ಒಂದೆಡೆ ಭೀಕರ ಬರ, ಮತ್ತೊಂದೆಡೆ ನೆರೆ ಹಾವಳಿ. ಇದಾದ ಕೆಲವೇ ತಿಂಗಳುಗಳಲ್ಲಿ ಮತ್ತೆ ಕೋವಿಡ್ ವೈರಸ್ ಕಂಟಕ.
ಕೊರೊನಾದಿಂದ ಸ್ಥಗಿತವಾಗಿದ್ದ ಸಂತೆಗಳು ಪುನಾರಂಭ: ಗ್ರಾಮೀಣ ಆರ್ಥಿಕತೆಗೂ ಬಂತು ಮರುಜೀವ!
ಇಷ್ಟೆಲ್ಲಸಮಸ್ಯೆಗಳ ನಡುವೆಯೂ ದಿಟ್ಟತನದಿಂದ ಆಡಳಿತ ನಡೆಸುತ್ತ, ರೈತರು, ಬಡವರ, ದೀನ ದಲಿತರ ಪರವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಪ್ರಾಮಾಣಿಕ ಕೆಲಸ ಮಾಡಿದ್ದಾರೆ ಎಂದರು. ಶಿರಾ ವಿಧಾನಸಭಾ ಕ್ಷೇತ್ರದಲ್ಲಿಕಳೆದ 70 ವರ್ಷಗಳಿಂದಲೂ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದೀರಿ.
ನಗರದ ಕೋಟೆ ಬಡಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಏರ್ಪಡಿಸಿದ್ದ ಬೂತ್ಮಟ್ಟದ ಸಭೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದ ಚುನಾವಣೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮತದಿಂದ ಬಿಜೆಪಿ ಗೆಲ್ಲಿಸಿದ್ದೇವೆ. ಅಲ್ಲಿಯೂ ಸಹ ಒಂದು ಬಾರಿಯೂ ಬಿಜೆಪಿ ಗೆದ್ದಿರಲಿಲ್ಲ.
ಅದೇ ರೀತಿ ಶಿರಾ ಕ್ಷೇತ್ರದಲ್ಲಿ ಸಹ ಬಿಜೆಪಿ ಅಭ್ಯರ್ಥಿ ಎಂದೂ ಗೆದ್ದಿಲ್ಲಎಂಬ ಮಾತನ್ನು ಅಳಿಸಿ ಹಾಕುವ ಮೂಲಕ ಕಮಲವನ್ನು ಅರಳಿಸುತ್ತೇವೆ ಎಂದರು. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗ ಒಂದೆಡೆ ಭೀಕರ ಬರ, ಮತ್ತೊಂದೆಡೆ ನೆರೆ ಹಾವಳಿ. ಇದಾದ ಕೆಲವೇ ತಿಂಗಳುಗಳಲ್ಲಿ ಮತ್ತೆ ಕೋವಿಡ್ ವೈರಸ್ ಕಂಟಕ.
ಕೊರೊನಾದಿಂದ ಸ್ಥಗಿತವಾಗಿದ್ದ ಸಂತೆಗಳು ಪುನಾರಂಭ: ಗ್ರಾಮೀಣ ಆರ್ಥಿಕತೆಗೂ ಬಂತು ಮರುಜೀವ!
ಇಷ್ಟೆಲ್ಲಸಮಸ್ಯೆಗಳ ನಡುವೆಯೂ ದಿಟ್ಟತನದಿಂದ ಆಡಳಿತ ನಡೆಸುತ್ತ, ರೈತರು, ಬಡವರ, ದೀನ ದಲಿತರ ಪರವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಪ್ರಾಮಾಣಿಕ ಕೆಲಸ ಮಾಡಿದ್ದಾರೆ ಎಂದರು. ಶಿರಾ ವಿಧಾನಸಭಾ ಕ್ಷೇತ್ರದಲ್ಲಿಕಳೆದ 70 ವರ್ಷಗಳಿಂದಲೂ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದೀರಿ.