ಆ್ಯಪ್ನಗರ

ಬಿಎಸ್‌ವೈ ಫೋನ್‌ ಕರೆ ಮಾಡಿ ಸಚಿವ ಮಾಧುಸ್ವಾಮಿ ಅವರನ್ನು ಕರೆಸಿಕೊಂಡಿದ್ದೇಕೆ?

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತುರ್ತಾಗಿ ದೂರವಾಣಿ ಕರೆ ಮಾಡಿ ಸಚಿವ ಮಾಧುಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಉಪ ಚುನಾವಣೆ ವೇಳಾಪಟ್ಟಿ ಪ್ರಕಟ ಹಿನ್ನೆಲೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.

Vijaya Karnataka Web 21 Sep 2019, 2:57 pm
ತುಮಕೂರು: ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶನಿವಾರ ತುರ್ತಾಗಿ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ.
Vijaya Karnataka Web ಬಿಎಸ್‌ವೈ, ಮಾಧುಸ್ವಾಮಿ
ಬಿಎಸ್‌ವೈ, ಮಾಧುಸ್ವಾಮಿ



ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವರಾಗಿರುವ ಜೆ.ಸಿ ಮಾಧುಸ್ವಾಮಿ ತಮ್ಮ ಸ್ವಕ್ಷೇತ್ರವಾದ ಚಿಕ್ಕನಾಯಕನಹಳ್ಳಿಯ ನವೋದಯ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಜಲಶಕ್ತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಮಾಧುಸ್ವಾಮಿ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗಲೇ ಬಿಎಸ್ ವೈ ದೂರವಾಣಿ ಕರೆ ಮಾಡಿದ್ದಾರೆ.

ಕರೆ ಸ್ವೀಕರಿಸಿದ ಬಳಿಕ ಸಭಿಕರನ್ನುದ್ದೇಶಿ ಮಾತನಾಡಿದ ಮಾಧುಸ್ವಾಮಿ, "ಯಡಿಯೂರಪ್ಪನವರು ಕರೆ ಮಾಡುತ್ತಿದ್ದಾರೆ. ಬೆಂಗಳೂರಿಗೆ ಕೂಡಲೇ ಬನ್ನಿ ಎಂದು. ಹಾಗಾಗಿ ಹೊರಡುತ್ತಿದ್ದೇನೆ" ಎಂದು ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ದೌಡಾಯಿಸಿದರು.

15 ವಿಧಾನಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಕರೆಸಿಕೊಂಡಿರಬಹುದು ಎಂದು ಅಧಿಕಾರಿಗಳು ಕಾರ್ಯಕ್ರಮ ಮುಂದುವರೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ