ತುಮಕೂರು: ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶನಿವಾರ ತುರ್ತಾಗಿ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವರಾಗಿರುವ ಜೆ.ಸಿ ಮಾಧುಸ್ವಾಮಿ ತಮ್ಮ ಸ್ವಕ್ಷೇತ್ರವಾದ ಚಿಕ್ಕನಾಯಕನಹಳ್ಳಿಯ ನವೋದಯ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಜಲಶಕ್ತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಮಾಧುಸ್ವಾಮಿ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗಲೇ ಬಿಎಸ್ ವೈ ದೂರವಾಣಿ ಕರೆ ಮಾಡಿದ್ದಾರೆ.
ಕರೆ ಸ್ವೀಕರಿಸಿದ ಬಳಿಕ ಸಭಿಕರನ್ನುದ್ದೇಶಿ ಮಾತನಾಡಿದ ಮಾಧುಸ್ವಾಮಿ, "ಯಡಿಯೂರಪ್ಪನವರು ಕರೆ ಮಾಡುತ್ತಿದ್ದಾರೆ. ಬೆಂಗಳೂರಿಗೆ ಕೂಡಲೇ ಬನ್ನಿ ಎಂದು. ಹಾಗಾಗಿ ಹೊರಡುತ್ತಿದ್ದೇನೆ" ಎಂದು ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ದೌಡಾಯಿಸಿದರು.
15 ವಿಧಾನಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಕರೆಸಿಕೊಂಡಿರಬಹುದು ಎಂದು ಅಧಿಕಾರಿಗಳು ಕಾರ್ಯಕ್ರಮ ಮುಂದುವರೆಸಿದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವರಾಗಿರುವ ಜೆ.ಸಿ ಮಾಧುಸ್ವಾಮಿ ತಮ್ಮ ಸ್ವಕ್ಷೇತ್ರವಾದ ಚಿಕ್ಕನಾಯಕನಹಳ್ಳಿಯ ನವೋದಯ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಜಲಶಕ್ತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಮಾಧುಸ್ವಾಮಿ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗಲೇ ಬಿಎಸ್ ವೈ ದೂರವಾಣಿ ಕರೆ ಮಾಡಿದ್ದಾರೆ.
ಕರೆ ಸ್ವೀಕರಿಸಿದ ಬಳಿಕ ಸಭಿಕರನ್ನುದ್ದೇಶಿ ಮಾತನಾಡಿದ ಮಾಧುಸ್ವಾಮಿ, "ಯಡಿಯೂರಪ್ಪನವರು ಕರೆ ಮಾಡುತ್ತಿದ್ದಾರೆ. ಬೆಂಗಳೂರಿಗೆ ಕೂಡಲೇ ಬನ್ನಿ ಎಂದು. ಹಾಗಾಗಿ ಹೊರಡುತ್ತಿದ್ದೇನೆ" ಎಂದು ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ದೌಡಾಯಿಸಿದರು.
15 ವಿಧಾನಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಕರೆಸಿಕೊಂಡಿರಬಹುದು ಎಂದು ಅಧಿಕಾರಿಗಳು ಕಾರ್ಯಕ್ರಮ ಮುಂದುವರೆಸಿದರು.