ಆ್ಯಪ್ನಗರ

ಬೆಂಗಳೂರಿನಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ ನಿರ್ಮಿಸಿ

ಸರ್ದಾರ್‌ವಲ್ಲಭ ಭಾಯಿ ಪಟೇಲ್‌ ಪುತ್ಥಳಿ ಮಾದರಿಯಲ್ಲಿ ಬೆಂಗಳೂರು ಕೇಂದ್ರ ಸ್ಥಾನದಲ್ಲಿ ಕೆಂಪೇಗೌಡರ ಬೃಹತ್‌ ಪುತ್ಥಳಿ ನಿರ್ಮಿಸಿ ಪ್ರವಾಸಿಗರ ಆರ್ಕಷಣೆ ಕೇಂದ್ರವಾಗಿ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇಡುವ ಅವಶ್ಯಕತೆ ಇದೆ ಎಂದು ಶ್ರೀ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ತಿಳಿಸಿದರು.

Vijaya Karnataka 1 Jul 2019, 5:00 am
ಸಿರಾ: ಗುಡಿ ಕೈಗಾರಿಕೆಗಳಿಗೆ ಮಾರುಕಟ್ಟೆ ಒದಗಿಸಿದ್ದ ಕೆಂಪೇಗೌಡರು ಬಳೆ ಪೇಟೆ, ಕುಂಬಾರ ಪೇಟೆ, ಅಕ್ಕಿ ಪೇಟೆ ಸೇರಿದಂತೆ ನಾನಾ ಪೇಟೆಗಳನ್ನು ಕಟ್ಟಿ ಎಲ್ಲಾ ಸಮುದಾಯಗಳಿ ಸಾಮಾಜಿಕ ಆದ್ಯತೆ ನೀಡಿ, ಇಡೀ ಜಗತ್ತು ಬೆಂಗಳೂರಿನತ್ತ ಮುಖ ಮಾಡುವಂತೆ ಮಾಡಿದ್ದಾರೆ. ಅವರ ಸೇವೆ ಚಿರಸ್ಥಾಯಿಯಾಗಲು, ಸರ್ದಾರ್‌ವಲ್ಲಭ ಭಾಯಿ ಪಟೇಲ್‌ ಪುತ್ಥಳಿ ಮಾದರಿಯಲ್ಲಿ ಬೆಂಗಳೂರು ಕೇಂದ್ರ ಸ್ಥಾನದಲ್ಲಿ ಕೆಂಪೇಗೌಡರ ಬೃಹತ್‌ ಪುತ್ಥಳಿ ನಿರ್ಮಿಸಿ ಪ್ರವಾಸಿಗರ ಆರ್ಕಷಣೆ ಕೇಂದ್ರವಾಗಿ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇಡುವ ಅವಶ್ಯಕತೆ ಇದೆ ಎಂದು ಶ್ರೀ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ತಿಳಿಸಿದರು.
Vijaya Karnataka Web build kempegowda statue in bangalore nanjaavadhoota swamiji
ಬೆಂಗಳೂರಿನಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ ನಿರ್ಮಿಸಿ


ತಾಲೂಕಿನ ಪಟ್ಟನಾಯಕನಹಳ್ಳಿ ಶ್ರೀಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ನೋಟ್‌ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಧ್ಯ ಭಾರತದ ಅಭಿವೃದ್ಧಿಯ ದೂರದೃಷ್ಟಿಕೋನ ಹಾಗೂ ಬೆಂಗಳೂರಿನ ಪ್ರಗತಿಗೆ ಮುನ್ನುಡಿ ಬರೆದು ಕ್ರಿಯಾಶೀಲ ಆಡಳಿತ ನೀಡಿ ಸರ್ವರಲ್ಲೂ ಸಮಾನತೆ ಸಾರಿದ ನಾಡಪ್ರಭು ಕೆಂಪೇಗೌಡ ಸಾಧನೆ ಶಾಶ್ವತವಾಗಿ ಮುಂದಿನ ಯುವಪೀಳಿಗೆಗೆ ಆದರ್ಶಪ್ರಾಯರಾಗಿದ್ದಾರೆ. ರಾಜ್ಯ ಸರಕಾರ ನಮ್ಮ ಮೆಟ್ರೋ ಮತ್ತು ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಕೆಂಪೇಗೌಡರ ಹೆಸರಿಟ್ಟು ಗೌರವಿಸಬೇಕೆಂದು ಒತ್ತಾಯಿಸಿದರು.

ಮುಖ್ಯ ಶಿಕ್ಷ ಕ ಪುಟ್ಟವೀರಯ್ಯ, ಶಿಕ್ಷ ಕರಾದ ಶಶಿಧರ್‌, ಮಾಯಣ್ಣ, ವೀರಭದ್ರಯ್ಯ, ಲೋಕೇಶ್‌, ಮೋಹನ್‌, ಓಬನಾಯಕ, ಲಕ್ಷ್ಮೀಪತಿ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ