ತುಮಕೂರು: ರಾಜರಾಜೇಶ್ವರಿ ನಗರದಂತೆ ಶಿರಾ ವಿಧಾನಸಭಾ ಉಪಚುನಾವಣಾ ಕಣ ಕುತೂಹಲದ ಕೇಂದ್ರಬಿಂದುವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ಕ್ಷೇತ್ರವನ್ನು ಪ್ರತಿಷ್ಠೆಯ ಕಣವನ್ನಾಗಿ ಸ್ವೀಕರಿಸಿದರೆ ಹೇಗಾದರೂ ಮಾಡಿ ಶಿರಾವನ್ನು ಗೆಲ್ಲಲೇ ಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಪಣತೊಟ್ಟಿದ್ದಾರೆ.
ಬಿ.ವೈ ವಿಜಯೇಂದ್ರ ಪಾಲಿಗೆ ಶಿರಾ ಉಪಚುನಾವಣೆ ರಾಜಕೀಯವಾಗಿ ಮಹತ್ವದ ಚುನಾವಣೆಯಾಗಿದೆ. ಕಳೆದ ಬಾರಿ ನಡೆದ ಉಪಚುನಾವಣೆಯಲ್ಲಿ ಕೆ.ಆರ್ ಪೇಟೆ ಉಸ್ತುವಾರಿಯನ್ನು ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರಗೆ ನೀಡಿದ್ದರು. ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದ ವಿಜಯೇಂದ್ರ ಕೆ.ಆರ್ ಪೇಟೆ ಕಮಲ ಅರಳಿಸುವಲ್ಲಿ ಸಫಲರಾಗಿದ್ದರು.
ಶಿರಾ ಬೈಲೆಕ್ಷನ್: ಮತದಾರರ ಮನಗೆಲ್ಲುವ ಯತ್ನ, ಮೂರು ಪಕ್ಷಗಳಿಂದ ಬಿರುಸಿನ ಪ್ರಚಾರ
ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಈ ಚುನಾವಣೆ ಅವರ ರಾಜಕೀಯ ಮುನ್ನಡೆಗೆ ಕಾರಣವಾಗಿತ್ತು. ಇದೀಗ ಪಕ್ಷದಲ್ಲಿ ವಿಜಯೇಂದ್ರ ವಿರುದ್ಧ ಅಸಮಾಧಾನಗಳು ತೀವ್ರಗೊಳ್ಳುತ್ತಿವೆ. ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಬಿಜೆಪಿ ಆಂತರಿಕ ವಲಯದಲ್ಲೂ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊಗೆಯಾಡುತ್ತಿದೆ.
ಇಂತಹ ಸಂದರ್ಭದಲ್ಲಿ ಶಿರಾ ಉಪಚುನಾವಣೆಯ ಹೊಣೆಯನ್ನು ಅವರಿಗೆ ಹೊರಿಸಲಾಗಿದೆ. ಕೋವಿಡ್ನಿಂದ ಗುಣಮುಖರಾದ ಬೆನ್ನಲ್ಲೇ ವಿಜಯೇಂದ್ರ ಶಿರಾದಲ್ಲಿ ಠಿಕಾಣಿ ಹೂಡಿದ್ದಾರೆ. ಸ್ಥಳೀಯವಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ರಣತಂತ್ರ ರೂಪಿಸುತ್ತಿದ್ದಾರೆ.
ಈ ನುಡುವೆ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪದ ಸುಳಿಮಳೆ ಗೈಯಲು ಶುರುಮಾಡಿದೆ. ಉಪಚುನಾವಣೆಗೆ ಕ್ಷಣಗಣನೆ ಆರಂಭ ಆಗುತ್ತಿದ್ದಂತ್ತೆ ರಾಜಕೀಯ ಆರೋಪ ಪ್ರತ್ಯಾರೋಪ ತೀವ್ರಗೊಳ್ಳುತ್ತಿದೆ. ವಿಜಯೇಂದ್ರ ಹಣದ ಮೂಲಕ ಚುನಾವಣೆ ನಡೆಸಲು ಮುಂದಾಗಿದ್ದಾರೆ ಎಂಬುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪವಾಗಿದೆ.
ಡಿಕೆಶಿ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಎಸ್ ಟಿ ಸೋಮಶೇಖರ್ ವಾಗ್ದಾಳಿ
ಆದರೆ ಇದ್ಯಾವುದಕ್ಕೂ ವಿಜಯೇಂದ್ರ ಬಹಿರಂಗ ಉತ್ತರ ನೀಡುತ್ತಿಲ್ಲ. ಬದಲಾಗಿ ಆಂತರಿಕವಾಗಿ ಶಿರಾದಲ್ಲಿ ಚುನಾವಣಾ ತಂತ್ರಗಾರಿಕೆಯನ್ನು ನಡೆಸುತ್ತಿದ್ದಾರೆ. ಅಷ್ಟಕ್ಕೂ ಕೆ ಆರ್ ಪೇಟೆ ವಾತಾವರಣ ಶಿರಾದಲ್ಲಿಲ್ಲ. ಶಿರಾದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಬಲವಾಗಿದೆ. ಬಿಜೆಪಿಗೆ ಇಲ್ಲಿ ಗೆಲುವು ಸುಲಭವಲ್ಲ ಎಂದೇ ವಿಮರ್ಶೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬಿಎಸ್ವೈ ಪುತ್ರನ ರಣತಂತ್ರ ಎಷ್ಟರ ಮಟ್ಟಿಗೆ ವರ್ಕೌಟ್ ಆಗಲಿದೆ ಎಂಬುವುದು ಕಾದುನೋಡಬೇಕಿದೆ.
ಬಿ.ವೈ ವಿಜಯೇಂದ್ರ ಪಾಲಿಗೆ ಶಿರಾ ಉಪಚುನಾವಣೆ ರಾಜಕೀಯವಾಗಿ ಮಹತ್ವದ ಚುನಾವಣೆಯಾಗಿದೆ. ಕಳೆದ ಬಾರಿ ನಡೆದ ಉಪಚುನಾವಣೆಯಲ್ಲಿ ಕೆ.ಆರ್ ಪೇಟೆ ಉಸ್ತುವಾರಿಯನ್ನು ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರಗೆ ನೀಡಿದ್ದರು. ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದ ವಿಜಯೇಂದ್ರ ಕೆ.ಆರ್ ಪೇಟೆ ಕಮಲ ಅರಳಿಸುವಲ್ಲಿ ಸಫಲರಾಗಿದ್ದರು.
ಶಿರಾ ಬೈಲೆಕ್ಷನ್: ಮತದಾರರ ಮನಗೆಲ್ಲುವ ಯತ್ನ, ಮೂರು ಪಕ್ಷಗಳಿಂದ ಬಿರುಸಿನ ಪ್ರಚಾರ
ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಈ ಚುನಾವಣೆ ಅವರ ರಾಜಕೀಯ ಮುನ್ನಡೆಗೆ ಕಾರಣವಾಗಿತ್ತು. ಇದೀಗ ಪಕ್ಷದಲ್ಲಿ ವಿಜಯೇಂದ್ರ ವಿರುದ್ಧ ಅಸಮಾಧಾನಗಳು ತೀವ್ರಗೊಳ್ಳುತ್ತಿವೆ. ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಬಿಜೆಪಿ ಆಂತರಿಕ ವಲಯದಲ್ಲೂ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊಗೆಯಾಡುತ್ತಿದೆ.
ಇಂತಹ ಸಂದರ್ಭದಲ್ಲಿ ಶಿರಾ ಉಪಚುನಾವಣೆಯ ಹೊಣೆಯನ್ನು ಅವರಿಗೆ ಹೊರಿಸಲಾಗಿದೆ. ಕೋವಿಡ್ನಿಂದ ಗುಣಮುಖರಾದ ಬೆನ್ನಲ್ಲೇ ವಿಜಯೇಂದ್ರ ಶಿರಾದಲ್ಲಿ ಠಿಕಾಣಿ ಹೂಡಿದ್ದಾರೆ. ಸ್ಥಳೀಯವಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ರಣತಂತ್ರ ರೂಪಿಸುತ್ತಿದ್ದಾರೆ.
ಈ ನುಡುವೆ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪದ ಸುಳಿಮಳೆ ಗೈಯಲು ಶುರುಮಾಡಿದೆ. ಉಪಚುನಾವಣೆಗೆ ಕ್ಷಣಗಣನೆ ಆರಂಭ ಆಗುತ್ತಿದ್ದಂತ್ತೆ ರಾಜಕೀಯ ಆರೋಪ ಪ್ರತ್ಯಾರೋಪ ತೀವ್ರಗೊಳ್ಳುತ್ತಿದೆ. ವಿಜಯೇಂದ್ರ ಹಣದ ಮೂಲಕ ಚುನಾವಣೆ ನಡೆಸಲು ಮುಂದಾಗಿದ್ದಾರೆ ಎಂಬುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪವಾಗಿದೆ.
ಡಿಕೆಶಿ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಎಸ್ ಟಿ ಸೋಮಶೇಖರ್ ವಾಗ್ದಾಳಿ
ಆದರೆ ಇದ್ಯಾವುದಕ್ಕೂ ವಿಜಯೇಂದ್ರ ಬಹಿರಂಗ ಉತ್ತರ ನೀಡುತ್ತಿಲ್ಲ. ಬದಲಾಗಿ ಆಂತರಿಕವಾಗಿ ಶಿರಾದಲ್ಲಿ ಚುನಾವಣಾ ತಂತ್ರಗಾರಿಕೆಯನ್ನು ನಡೆಸುತ್ತಿದ್ದಾರೆ. ಅಷ್ಟಕ್ಕೂ ಕೆ ಆರ್ ಪೇಟೆ ವಾತಾವರಣ ಶಿರಾದಲ್ಲಿಲ್ಲ. ಶಿರಾದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಬಲವಾಗಿದೆ. ಬಿಜೆಪಿಗೆ ಇಲ್ಲಿ ಗೆಲುವು ಸುಲಭವಲ್ಲ ಎಂದೇ ವಿಮರ್ಶೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬಿಎಸ್ವೈ ಪುತ್ರನ ರಣತಂತ್ರ ಎಷ್ಟರ ಮಟ್ಟಿಗೆ ವರ್ಕೌಟ್ ಆಗಲಿದೆ ಎಂಬುವುದು ಕಾದುನೋಡಬೇಕಿದೆ.