ಆ್ಯಪ್ನಗರ

ಎಡೆಯೂರಿನಲ್ಲಿ ಸಿಎಂ ಪಾದಪೂಜೆ ಮಾಡಿ ಅಭಿಮಾನ ಮೆರೆದ ಕಾರ್ಯಕರ್ತ

ಕಲ್ಪತರು ನಾಡು ತುಮಕೂರಿಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಈ ವೇಳೆ, ಎಡೆಯೂರಿನಲ್ಲಿ ದೇಗುಲ ಪ್ರವೇಶಿಸುವ ಮುನ್ನ ಕಾರ್ಯಕರ್ತನೊಬ್ಬ ಸಿಎಂ ಪಾದಪೂಜೆ ಮಾಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ.

Vijaya Karnataka Web 18 Oct 2019, 12:20 pm
ತುಮಕೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆಂದು ಶುಕ್ರವಾರ ಎಡೆಯೂರು ಸಿದ್ಧಲಿಂಗೇಶ್ವರ ಕ್ಷೇತ್ರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಪಾದ ತೊಳೆಯುವ ಮೂಲಕ ದೇವಾಲಯದೊಳಗೆ ಕರೆದೊಯ್ಯಲಾಯಿತು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ದೇಗುಲವನ್ನು ಪ್ರವೇಶಿಸುವ ವೇಳೆ ಕಾರ್ಯಕರ್ತನೊಬ್ಬ ಬಿ.ಎಸ್ ಯಡಿಯೂರಪ್ಪ ಅವರ ಪಾದ ತೊಳೆದು ಅಭಿಮಾನ ಮೆರೆದನು. ಇದು ಸಾರ್ವಜನಿಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.


ಕುಣಿಗಲ್ ತಾಲ್ಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ಕ್ಷೇತ್ರದಲ್ಲಿ ಶುಕ್ರವಾರ ಬಿ.ಎಸ್ ಯಡಿಯೂರಪ್ಪ ಅವರು 10 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ನಾಲ್ಕು ಕೋಟಿ ರೂ. ಸ್ವಂತ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಶುಕ್ರವಾರ ಎಡೆಯೂರಿನಲ್ಲಿ ಸಿಎಂ ಕುಟುಂಬ: ಪತ್ನಿ ಮೈತ್ರಾದೇವಿ ಹೆಸರಿನಲ್ಲಿ ಸಮುದಾಯ ಭವನಕ್ಕೆ ಅಡಿಗಲ್ಲು

ತಮ್ಮ ಮನೆ ದೇವರು ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಸಿಎಂ ಯಡಿಯೂರಪ್ಪ ಸ್ವಂತ ಖರ್ಚಿನಲ್ಲಿ ಪತ್ನಿ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ ಎಂದು ಗುರುವಾರ ವರದಿಯಾಗಿತ್ತು. ಈ ಹಿಂದೆ ಸಿಎಂ ಆಗಿದ್ದಾಗ ಎಡೆಯೂರು ಕ್ಷೇತ್ರದ ಅಭಿವೃದ್ಧಿಗೆ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಪಡಿಸಿದ್ದರು. ಆದರೆ, ದೇವಸ್ಥಾನದ ಎರಡನೇ ಹಂತದ ಕಾಮಗಾರಿ, ಪೂರ್ಣಗೊಂಡಿದ್ದರೂ ಉದ್ಘಾಟನೆಯಾಗದೇ ಉಳಿದಿತ್ತು. ಇದೀಗ ಈ ಕಾಮಗಾರಿಯನ್ನು ಸಿಎಂ ಯಡಿಯೂರಪ್ಪ ಉದ್ಘಾಟನೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ