ಆ್ಯಪ್ನಗರ

ಸಿದ್ದರಾಮಯ್ಯ ಏನು ಲಿಂಗಾಯತರಾ?: ಶಾಮನೂರು ಶಿವಶಂಕರಪ್ಪ ಕಿಡಿ

ಲಿಂಗಾಯತರ ಬಗ್ಗೆ ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದರು. ಈ ಸಂಬಂಧ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಮಾಜಿ ಸಿಎಂರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Vijaya Karnataka Web 28 Jul 2019, 3:22 pm
ತುಮಕೂರು: ಲಿಂಗಾಯತರು ಹಿಂದೂ ಧರ್ಮದ ಒಳಗೂ ಇಲ್ಲ ಹೊರಗೂ ಇಲ್ಲ ಎಂದು ಹೇಳಿಕೆ ಕೊಡುವುದರ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವನ್ನು ಮುನ್ನಲೆಗೆ ತಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಟಾಂಗ್ ಕೊಟ್ಟಿದ್ದಾರೆ.
Vijaya Karnataka Web shamanur shivashankarappa


ಲಿಂಗಾಯತ ಧರ್ಮ ಹಿಂದು ಧರ್ಮದಲ್ಲಿ ಇಲ್ಲ ಎಂದು ಹೇಳಲು ಸಿದ್ದರಾಮಯ್ಯ ಏನು ಲಿಂಗಾಯತರಾ? ಎಂದು ಹೇಳುವ ಮೂಲಕ ಶಾಮನೂರು ತಿರುಗೇಟು ಕೊಟ್ಟಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹೇರೂರಿನಲ್ಲಿ ವೀರಶೈವ ಮಹಾಸಭಾದಿಂದ ನಡೆದ ಪ್ರತಿಭಾಪುರಸ್ಕಾರ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮದವರೊಂದಿಗೆ ಮಾತನಾಡಿದ ಶಾಮನೂರು, ಹಿಂದೆ ಸಿದ್ದರಾಮಯ್ಯರನವರು ಧರ್ಮ ಒಡೆಯುವ ಪ್ರಯತ್ನ ಮಾಡಿ ವಿಫಲರಾಗಿ ತಡ್ಕಂಡಿದ್ರು. ಈಗ ಮತ್ತೆ ಹುಟ್ಟುಹಾಕೋದು ಸರಿಯಲ್ಲ. ವೀರಶೈವ ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ ಎಂದುಕೊಂಡು ನಮ್ಮ ಜನಾಂಗ ಬದುಕುತಿದ್ದೇವೆ. ಇದನ್ನು ಫಾಲೋ ಮಾಡಿಕೊಂಡು ಬಂದಿದ್ದೇವೆ ಎಂದು ಶಾಮನೂರು ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ